Featured

ಶಬರಿಮಲೆ ಪ್ರವೇಶಿಸುವುದು ನಿಶ್ಚಿತ : ತೃಪ್ತಿ ದೇಸಾಯಿ

ತಿರುವನಂತಪುರಂ/ದೆಹಲಿ:  ನವೆಂಬರ್​ 17ರಂದು ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಿಸುವುದು ಖಚಿತ ಎಂದು ಭೂಮಾತಾ ಬ್ರಿಗೇಡ್​ ಸಂಸ್ಥಾಪಕಿ ತೃಪ್ತಿ ದೇಸಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹಿಳೆಯರ ಪ್ರವೇಶಾವಕಾಶ ಪ್ರಶ್ನಿಸಿ ನೀಡಿರುವ ತನ್ನದೇ ತೀರ್ಪನ್ನು ಜನವರಿಯಲ್ಲಿ ಮರುಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿರುವ ನಡುವೆಯೇ, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ತೃಪ್ತಿ ದೇಸಾಯಿ  ಅವರು ಮಂಡಲ ಮಕರಜ್ಯೋತಿ ಯಾತ್ರೆ ಆರಂಭದಂದು (ನ.17 )ದೇಗುಲ ಪ್ರವೇಶಿಸುವುದಾಗಿ ತಿಳಿಸಿದ್ದಾರೆ.

ಅಯ್ಯಪ್ಪ ದರ್ಶನ ಪಡೆಯದೆ ಮಹಾರಾಷ್ಟ್ರಕ್ಕೆ ವಾಪಸಾಗುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದ್ದಾರೆ. 10ರಿಂದ 50 ವರ್ಷ ವಯೋಮಾನದ ಇತರ ಆರು ಮಹಿಳೆಯರನ್ನೂ ದೇಗುಲಕ್ಕೆ ಕರೆಯದೊಯ್ಯುವುದಾಗಿ ಹೇಳಿದ್ದಾರೆ.

ದೇವಸ್ಥಾನದ ಸಂಪ್ರದಾಯ ಮುರಿಯಲು ಮಹಿಳೆಯರು ಮುಂದಾದರೆ, ಅವರ ಮುಂದೆ ಮಲಗಿಯಾದರೂ ಆ ಪ್ರಯತ್ನವನ್ನು ತಡೆಯುತ್ತೇವೆ ಎಂದು ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ಹೇಳಿದ್ದಾರೆ.

ರಾಹುಲ್ ಈಶ್ವರ್ ಎಲ್ಲ ವಯಸ್ಸಿನ ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ನ ಈ ಹಿಂದಿನ ತೀರ್ಪಿಗೆ ತಡೆ ನೀಡಲು ಸಾಧ್ಯವಿಲ್ಲ. ಮೇಲ್ಮನವಿ ಪರಿಶೀಲನೆ ಅರ್ಜಿಯನ್ನು ಮುಂದಿನ ಜನವರಿ ಇಪ್ಪತ್ತೆರಡರಂದು ಕೈಗೆತ್ತಿಕೊಳ್ಳಲಾಗುವುದು ಎಂದು ಕೋರ್ಟ್ ತಿಳಿಸಿದೆ.

ಭದ್ರತೆಗೆ ಮನವಿ: ಈ ಮಧ್ಯೆ, ದೇಸಾಯಿ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದು ದೇಗುಲ ಭೇಟಿ ವೇಳೆ ಭದ್ರತೆ ಒದಗಿಸುವಂತೆ ಕೋರಿದ್ದಾರೆ.

 

 

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago