Featured

ಶಬರಿಮಲೆ ಪ್ರವೇಶ ತೃಪ್ತಿ ದೇಸಾಯಿ ಪ್ರಯತ್ನ ವಿಫಲ ; ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೇ ಗೆರಿಲ್ಲಾ ತಂತ್ರ ಉಪಯೋಗಿಸಿ ಶಬರಿಮಲೆಗೆ ಪ್ರವೇಶ : ತೃಪ್ತಿ ದೇಸಾಯಿ

ಕೊಚ್ಚಿ:ಶಬರಿಮಲೆ ಅಯ್ಯಪ್ಪನ ದರ್ಶನಕ್ಕಾಗಿ ಬಂದಿದ್ದ ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ದೇವರ ದರ್ಶನ ಕಾಣದೆ ಮಹಾರಾಷ್ಟ್ರಕ್ಕೆ ವಾಪಸಾಗಿದ್ದಾರೆ.

ತೃಪ್ತಿ ಹಾಗೂ ಬೆಂಬಲಿಗರು ಶಬರಿಮಲೆ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅಯ್ಯಪ್ಪಸ್ವಾಮಿ ಭಕ್ತರು ಅವರನ್ನು ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಬರದಂತೆ ತಡೆ ಹಿಡಿದಿದ್ದರು. ಈ ಸಂದರ್ಭ ಪೊಲೀಸರು ತೃಪ್ತಿ ಅವರಿಗೆ ರಕ್ಷಣೆ ಒದಗಿಸಿದರೂ, ಅಲ್ಲಿಂದ ಸನ್ನಿಧಾನಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.

ನಿರಂತರ ಪ್ರತಿಭಟನೆ ಹಿನ್ನಲೆಯಲ್ಲಿ ತೃಪ್ತಿ ದೇಸಾಯಿ ಮತ್ತು ಅವರ ತಂಡ ಕೊಚ್ಚಿ ವಿಮಾನ ನಿಲ್ದಾಣದಲ್ಲೇ ಉಳಿಯುವಂತಾಯಿತು. ಸುಮಾರು 14 ಗಂಟೆಗಳ ಕಾಲ ಕಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಪೊಲೀಸರ ಸಲಹೆ ಮೇರೆಗೆ ತೃಪ್ತಿ ದೇಸಾಯಿ ಮತ್ತು ಅವರ ತಂಡವನ್ನು ಮನವೊಲಿಸಿ ಪುಣೆಗೆ ರಾತ್ರಿ 9.25ರ ವಿಮಾನದಲ್ಲಿ ವಾಪಸ್ ಕಳುಹಿಸಲಾಗಿದೆ.

“ಈ ಬಾರಿ ನಾವು ಶಬರಿಮಲೆಗೆ ಹೋಗುವುದಕ್ಕೂ ಮೊದಲು ಘೋಷಣೆ ಮಾಡಿಕೊಂಡಿದ್ದೆವು. ಆದರೆ, ಮುಂದಿನ ಬಾರಿ ಹೋಗುವಾಗ ಸದ್ದಿಲ್ಲದೆ ಹೋಗುವುದಾಗಿ” ತೃಪ್ತಿ ದೇಸಾಯಿ ಹೇಳಿದ್ದಾರೆ.

ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೇ ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಪಡೆಯುತ್ತೇವೆ. ಗೆರಿಲ್ಲಾ ತಂತ್ರ ಅನುಸರಿಸುತ್ತೇವೆ. ಇದಕ್ಕೆ ಪೊಲೀಸರೂ ನಮಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದ್ದಾರೆ.

“ಮುಂದಿನ ಬಾರಿ ಬಂದಾಗ ಭದ್ರತೆ ಒದಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಮ್ಮಿಂದ ಅಲ್ಲಿ ಅಶಾಂತಿ ಉಂಟಾಗದಿರಲೆಂದು ನಾವು ಹಿಂದಿರುಗಿದ್ದೇವೆ. ನಾವು ದೇವರ ದರ್ಶನಕ್ಕೆ ಆಗಮಿಸುತ್ತಿರುವುದಾಗಿ ಘೋಷಣೆ ಮಾಡಿ ಕೇರಳಕ್ಕೆ ಹೊರಟಿದ್ದರಿಂದಲೇ ನಮ್ಮ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಮುಂದಿನ ಬಾರಿ ಯಾವುದೇ ಮುನ್ಸೂಚನೆ ನೀಡದೆ ಹೋಗುತ್ತೇವೆ” ಎಂದು ಹೇಳಿದರು.

 

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

3 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

3 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

3 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

4 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

4 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

4 hours ago