Featured

ಶಬರಿಮಲೆ ಪ್ರವೇಶ ತೃಪ್ತಿ ದೇಸಾಯಿ ಪ್ರಯತ್ನ ವಿಫಲ ; ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೇ ಗೆರಿಲ್ಲಾ ತಂತ್ರ ಉಪಯೋಗಿಸಿ ಶಬರಿಮಲೆಗೆ ಪ್ರವೇಶ : ತೃಪ್ತಿ ದೇಸಾಯಿ

ಕೊಚ್ಚಿ:ಶಬರಿಮಲೆ ಅಯ್ಯಪ್ಪನ ದರ್ಶನಕ್ಕಾಗಿ ಬಂದಿದ್ದ ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ದೇವರ ದರ್ಶನ ಕಾಣದೆ ಮಹಾರಾಷ್ಟ್ರಕ್ಕೆ ವಾಪಸಾಗಿದ್ದಾರೆ.

ತೃಪ್ತಿ ಹಾಗೂ ಬೆಂಬಲಿಗರು ಶಬರಿಮಲೆ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅಯ್ಯಪ್ಪಸ್ವಾಮಿ ಭಕ್ತರು ಅವರನ್ನು ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಬರದಂತೆ ತಡೆ ಹಿಡಿದಿದ್ದರು. ಈ ಸಂದರ್ಭ ಪೊಲೀಸರು ತೃಪ್ತಿ ಅವರಿಗೆ ರಕ್ಷಣೆ ಒದಗಿಸಿದರೂ, ಅಲ್ಲಿಂದ ಸನ್ನಿಧಾನಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.

ನಿರಂತರ ಪ್ರತಿಭಟನೆ ಹಿನ್ನಲೆಯಲ್ಲಿ ತೃಪ್ತಿ ದೇಸಾಯಿ ಮತ್ತು ಅವರ ತಂಡ ಕೊಚ್ಚಿ ವಿಮಾನ ನಿಲ್ದಾಣದಲ್ಲೇ ಉಳಿಯುವಂತಾಯಿತು. ಸುಮಾರು 14 ಗಂಟೆಗಳ ಕಾಲ ಕಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಪೊಲೀಸರ ಸಲಹೆ ಮೇರೆಗೆ ತೃಪ್ತಿ ದೇಸಾಯಿ ಮತ್ತು ಅವರ ತಂಡವನ್ನು ಮನವೊಲಿಸಿ ಪುಣೆಗೆ ರಾತ್ರಿ 9.25ರ ವಿಮಾನದಲ್ಲಿ ವಾಪಸ್ ಕಳುಹಿಸಲಾಗಿದೆ.

“ಈ ಬಾರಿ ನಾವು ಶಬರಿಮಲೆಗೆ ಹೋಗುವುದಕ್ಕೂ ಮೊದಲು ಘೋಷಣೆ ಮಾಡಿಕೊಂಡಿದ್ದೆವು. ಆದರೆ, ಮುಂದಿನ ಬಾರಿ ಹೋಗುವಾಗ ಸದ್ದಿಲ್ಲದೆ ಹೋಗುವುದಾಗಿ” ತೃಪ್ತಿ ದೇಸಾಯಿ ಹೇಳಿದ್ದಾರೆ.

ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೇ ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಪಡೆಯುತ್ತೇವೆ. ಗೆರಿಲ್ಲಾ ತಂತ್ರ ಅನುಸರಿಸುತ್ತೇವೆ. ಇದಕ್ಕೆ ಪೊಲೀಸರೂ ನಮಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದ್ದಾರೆ.

“ಮುಂದಿನ ಬಾರಿ ಬಂದಾಗ ಭದ್ರತೆ ಒದಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಮ್ಮಿಂದ ಅಲ್ಲಿ ಅಶಾಂತಿ ಉಂಟಾಗದಿರಲೆಂದು ನಾವು ಹಿಂದಿರುಗಿದ್ದೇವೆ. ನಾವು ದೇವರ ದರ್ಶನಕ್ಕೆ ಆಗಮಿಸುತ್ತಿರುವುದಾಗಿ ಘೋಷಣೆ ಮಾಡಿ ಕೇರಳಕ್ಕೆ ಹೊರಟಿದ್ದರಿಂದಲೇ ನಮ್ಮ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಮುಂದಿನ ಬಾರಿ ಯಾವುದೇ ಮುನ್ಸೂಚನೆ ನೀಡದೆ ಹೋಗುತ್ತೇವೆ” ಎಂದು ಹೇಳಿದರು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

10 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

12 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

12 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

12 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

12 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

12 hours ago