Featured

ಶಬರಿಮಲೆ ಭಕ್ತಾದಿಗಳಿಗೆ ವಿಮಾನದಲ್ಲಿ ಇರುಮುಡಿ ಜತೆ ತೆಂಗಿನಕಾಯಿ ಕೊಂಡೊಯ್ಯಲು ಅನುಮತಿ – Vishwanews24

ಶಬರಿಮಲೆ ಭಕ್ತಾದಿಗಳಿಗೆ ವಿಮಾನದಲ್ಲಿ ಇರುಮುಡಿ ಜತೆಗೆ ತೆಂಗಿನಕಾಯಿ ಕೊಂಡೊಯ್ಯಲು ಅನುಮತಿ

ನವದೆಹಲಿ: ಇನ್ನು ಮುಂದೆ ಶಬರಿಮಲೆ ಭಕ್ತಾದಿಗಳಿಗೆ ವಿಮಾನದ ‘ಕ್ಯಾಬಿನ್‌ ಬ್ಯಾಗೇಜ್‌’ನಲ್ಲಿ ಇರುಮುಡಿ ಜತೆಗೆ ತೆಂಗಿನಕಾಯಿ ಕೊಂಡೊಯ್ಯಲು ವಿಮಾನಯಾನ ಭದ್ರತಾ ನಿಯಂತ್ರಕ ಸಂಸ್ಥೆಯಾದ ‘ಬಿಸಿಎಎಸ್‌’ ಅನುಮತಿ ನೀಡಿದೆ.

ಸಾಮಾನ್ಯವಾಗಿ ತೆಂಗಿನಕಾಯಿ ದಹನಶೀಲವಾಗಿದ್ದರಿಂದ ಅದನ್ನು ವಿಮಾನದೊಳಗಡೆ ಕ್ಯಾಬಿನ್‌ ಬ್ಯಾಗೇಜ್‌ನಲ್ಲಿ ಕೊಂಡೊಯ್ಯಲು ಬಿಡಲಾಗುತ್ತಿರಲಿಲ್ಲ. ಆದರೆ ವಿಶೇಷವಾಗಿ ಶಬರಿಮಲೆ ಯಾತ್ರಾರ್ಥಿಗಳ ಇರುಮುಡಿ ಇರುವ ಬ್ಯಾಗೇಜ್‌ ಅನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸಿದ ಬಳಿಕ, ಅಂದರೆ ಎಕ್ಸ್‌ರೇ, ಸ್ಫೋಟಕ ಪತ್ತೆ ಪರೀಕ್ಷೆ ಹಾಗೂ ವಿಮಾನಯಾನ ಭದ್ರತಾ ಸಿಬ್ಬಂದಿ (ಎಎಸ್‌ಜಿ) ಸ್ವಯಂ ಪರೀಕ್ಷೆ ನಡೆಸಿದ ಬಳಿಕ ಅನುಮತಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಹೋಗುತ್ತಿರುವ ಭಕ್ತಾದಿಗಳು ದೇವರಿಗೆ ಸಮರ್ಪಿಸಲು ತಮ್ಮೊಂದಿಗೆ ಇರುಮುಡಿ ಕಟ್ಟು (ತುಪ್ಪ ಹಾಗೂ ತೆಂಗಿನಕಾಯಿ ಇರುವ ಕಟ್ಟು) ಕೊಂಡೊಯ್ಯುತ್ತಾರೆ. ಈ ನಿಟ್ಟಿನಲ್ಲಿಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಿಗದಿತ ಅವಧಿಯವರೆಗೆ ಮಾತ್ರ ಈ ವಿಶೇಷ ವಿನಾಯಿತಿ ನೀಡಲಾಗಿದೆ ಎಂದು ‘ಬಿಸಿಎಎಸ್‌ ’ ಸ್ಪಷ್ಟಪಡಿಸಿದೆ.

🌐 ಉಡುಪಿ: ಅಲಂಗಾರ್ ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಗೆ ದಿ.ಜೋಸೆಫ್ ಮೇರಿ ಪಿಂಟೊ ನಿಡ್ಡೋಡಿ ಪ್ರಶಸ್ತಿಯ ಗರಿ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago