Featured

ಶಬರಿಮಲೆ ವಿವಾದ : ಪರಿಶೀಲನೆ ಗಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಶಬರಿಮಲೆಯತ್ತ ಪ್ರಯಾಣ ..

ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ.

ಇಂದು ಮುಂಜಾನೆ ಕೇರಳದ ಚೆಂಗನ್ನೂರು ತಲುಪಿದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಸಂಸದ ವಿ.ಮುರಳೀಧರನ್ ರಾಜ್ಯ ಕಾರ್ಯದರ್ಶಿ ಜೆ.ಆರ್. ಪದ್ಮಕುಮಾರ್ ಮತ್ತು ಪಥನಂತಿಟ್ಟ ಜಿಲ್ಲೆಯ ಅಧ್ಯಕ್ಷ ಅಶೋಕನ್ ಜೊತೆ ಚರ್ಚೆ ನಡೆಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ.

ಮಾಲಾಧಾರಿಯಾಗಿ ತೆರಳಿರುವ  ನಳಿನ್ ಕುಮಾರ್ ಶಬರಿಮಲೆ ಅಯ್ಯಪ್ಪ ದೇವರ ದರ್ಶನವನ್ನೂ ಪಡೆಯಲಿದ್ದಾರೆ. ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ. ಆದರೆ ಕೇರಳ ಪೊಲೀಸರು ಶಬರಿಮಲೆಗೆ ಭೇಟಿ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ,  ರಾಜ್ಯ ಸಭಾ ಸದಸ್ಯ ವಿ.ಮುರಳೀಧರನ್ ಸೇರಿದಂತೆ ತಂಡ ದಲ್ಲಿರುವ ಎಲ್ಲಾ ಬಿಜೆಪಿ ಮುಖಂಡರನ್ನು ಕೇರಳ ಪೋಲೀಸರು ಬಂಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವೇಳೆ ನಳಿನ್ ಕುಮಾರ್‌ ಕೇರಳದಲ್ಲಿ ಬಂಧನವಾದಲ್ಲಿ ದಕ್ಷಿಣಕನ್ನಡ ಜಿಲ್ಲಯಲ್ಲಿಯೂ ಕೇರಳ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ತೀವೃಗೊಳ್ಳುವ ಸಾಧ್ಯತೆಗಳೂ ಇದೆ.

ಪೊಲೀಸ್‌ ಬಿಗಿ ಬಂದೋಬಸ್ತ್‌ನಲ್ಲಿ ನೂರಾರು ಭಕ್ತರು ದರ್ಶನ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago