ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ.
ಇಂದು ಮುಂಜಾನೆ ಕೇರಳದ ಚೆಂಗನ್ನೂರು ತಲುಪಿದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಸಂಸದ ವಿ.ಮುರಳೀಧರನ್ ರಾಜ್ಯ ಕಾರ್ಯದರ್ಶಿ ಜೆ.ಆರ್. ಪದ್ಮಕುಮಾರ್ ಮತ್ತು ಪಥನಂತಿಟ್ಟ ಜಿಲ್ಲೆಯ ಅಧ್ಯಕ್ಷ ಅಶೋಕನ್ ಜೊತೆ ಚರ್ಚೆ ನಡೆಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ.
ಅಲ್ಲದೆ ಮಾಲಾಧಾರಿಯಾಗಿ ತೆರಳಿರುವ ಅವರು ಶಬರಿಮಲೆ ಅಯ್ಯಪ್ಪ ದೇವರ ದರ್ಶನವನ್ನೂ ಪಡೆಯಲಿದ್ದಾರೆ.
ಅಧ್ಯಯನ ನಡೆಸಿ ತಯಾರಿಸಿದ ವರದಿಯನ್ನು ಕೇಂದ್ರ ಬಿಜೆಪಿ ನಾಯಕರುಗಳಿಗೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಲಿದ್ದಾರೆ.
ಮೂಲಗಳ ಪ್ರಕಾರ ಶಬರಿಮಲೆಗೆ ಭೇಟಿ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ , ರಾಜ್ಯ ಸಭಾ ಸದಸ್ಯ ವಿ.ಮುರಳೀಧರನ್ ಸೇರಿದಂತೆ ತಂಡ ದಲ್ಲಿರುವ ಎಲ್ಲಾ ಬಿಜೆಪಿ ಮುಖಂಡರನ್ನು ಕೇರಳ ಪೋಲೀಸರು ಬಂಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ನಳಿನ್ ಕುಮಾರ್ ಕೇರಳದಲ್ಲಿ ಬಂಧನವಾದಲ್ಲಿ ದಕ್ಷಿಣಕನ್ನಡ ಜಿಲ್ಲಯಲ್ಲಿಯೂ ಕೇರಳ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ತೀವೃಗೊಳ್ಳುವ ಸಾಧ್ಯತೆಗಳೂ ಇದೆ.
ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ನೂರಾರು ಭಕ್ತರು ದರ್ಶನ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…