ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ.
ಇಂದು ಮುಂಜಾನೆ ಕೇರಳದ ಚೆಂಗನ್ನೂರು ತಲುಪಿದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಸಂಸದ ವಿ.ಮುರಳೀಧರನ್ ರಾಜ್ಯ ಕಾರ್ಯದರ್ಶಿ ಜೆ.ಆರ್. ಪದ್ಮಕುಮಾರ್ ಮತ್ತು ಪಥನಂತಿಟ್ಟ ಜಿಲ್ಲೆಯ ಅಧ್ಯಕ್ಷ ಅಶೋಕನ್ ಜೊತೆ ಚರ್ಚೆ ನಡೆಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ.
ಅಲ್ಲದೆ ಮಾಲಾಧಾರಿಯಾಗಿ ತೆರಳಿರುವ ಅವರು ಶಬರಿಮಲೆ ಅಯ್ಯಪ್ಪ ದೇವರ ದರ್ಶನವನ್ನೂ ಪಡೆಯಲಿದ್ದಾರೆ.
ಅಧ್ಯಯನ ನಡೆಸಿ ತಯಾರಿಸಿದ ವರದಿಯನ್ನು ಕೇಂದ್ರ ಬಿಜೆಪಿ ನಾಯಕರುಗಳಿಗೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಲಿದ್ದಾರೆ.
ಮೂಲಗಳ ಪ್ರಕಾರ ಶಬರಿಮಲೆಗೆ ಭೇಟಿ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ , ರಾಜ್ಯ ಸಭಾ ಸದಸ್ಯ ವಿ.ಮುರಳೀಧರನ್ ಸೇರಿದಂತೆ ತಂಡ ದಲ್ಲಿರುವ ಎಲ್ಲಾ ಬಿಜೆಪಿ ಮುಖಂಡರನ್ನು ಕೇರಳ ಪೋಲೀಸರು ಬಂಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ನಳಿನ್ ಕುಮಾರ್ ಕೇರಳದಲ್ಲಿ ಬಂಧನವಾದಲ್ಲಿ ದಕ್ಷಿಣಕನ್ನಡ ಜಿಲ್ಲಯಲ್ಲಿಯೂ ಕೇರಳ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ತೀವೃಗೊಳ್ಳುವ ಸಾಧ್ಯತೆಗಳೂ ಇದೆ.
ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ನೂರಾರು ಭಕ್ತರು ದರ್ಶನ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…