ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ.
ಇಂದು ಮುಂಜಾನೆ ಕೇರಳದ ಚೆಂಗನ್ನೂರು ತಲುಪಿದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಸಂಸದ ವಿ.ಮುರಳೀಧರನ್ ರಾಜ್ಯ ಕಾರ್ಯದರ್ಶಿ ಜೆ.ಆರ್. ಪದ್ಮಕುಮಾರ್ ಮತ್ತು ಪಥನಂತಿಟ್ಟ ಜಿಲ್ಲೆಯ ಅಧ್ಯಕ್ಷ ಅಶೋಕನ್ ಜೊತೆ ಚರ್ಚೆ ನಡೆಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ.
ಅಲ್ಲದೆ ಮಾಲಾಧಾರಿಯಾಗಿ ತೆರಳಿರುವ ಅವರು ಶಬರಿಮಲೆ ಅಯ್ಯಪ್ಪ ದೇವರ ದರ್ಶನವನ್ನೂ ಪಡೆಯಲಿದ್ದಾರೆ.
ಅಧ್ಯಯನ ನಡೆಸಿ ತಯಾರಿಸಿದ ವರದಿಯನ್ನು ಕೇಂದ್ರ ಬಿಜೆಪಿ ನಾಯಕರುಗಳಿಗೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಲಿದ್ದಾರೆ.
ಮೂಲಗಳ ಪ್ರಕಾರ ಶಬರಿಮಲೆಗೆ ಭೇಟಿ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ , ರಾಜ್ಯ ಸಭಾ ಸದಸ್ಯ ವಿ.ಮುರಳೀಧರನ್ ಸೇರಿದಂತೆ ತಂಡ ದಲ್ಲಿರುವ ಎಲ್ಲಾ ಬಿಜೆಪಿ ಮುಖಂಡರನ್ನು ಕೇರಳ ಪೋಲೀಸರು ಬಂಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ನಳಿನ್ ಕುಮಾರ್ ಕೇರಳದಲ್ಲಿ ಬಂಧನವಾದಲ್ಲಿ ದಕ್ಷಿಣಕನ್ನಡ ಜಿಲ್ಲಯಲ್ಲಿಯೂ ಕೇರಳ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ತೀವೃಗೊಳ್ಳುವ ಸಾಧ್ಯತೆಗಳೂ ಇದೆ.
ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ನೂರಾರು ಭಕ್ತರು ದರ್ಶನ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…