Featured

ಶಬರಿಮಲೆ ವಿವಾದ : ಪ್ರತಿಯೊಬ್ಬರಿಗೂ ಪ್ರಾರ್ಥಿಸುವ ಹಕ್ಕಿದೆ ಆದರೆ ಅಪವಿತ್ರಗೊಳಿಸುವ ಹಕ್ಕಿಲ್ಲ :ಸ್ಮೃತಿ ಇರಾನಿ

ಮುಂಬಯಿ : ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಸುಪ್ರೀಂ ಕೋರ್ಟ್‌  ಪ್ರವೇಶಾವಕಾಶ ನೀಡಿರುವುದಕ್ಕೆ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಕೇಂದ್ರ ಸಚಿವ ಸ್ಮ್ರತಿ ಇರಾನಿ ಅವರು “ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಹಕ್ಕೆಂದರೆ ದೇವಸ್ಥಾನವನ್ನು ಅಪವಿತ್ರಗೊಳಿಸುವ ಹಕ್ಕೆಂದು ತಿಳಿಯುವಂತಿಲ್ಲ” ಎಂದು ಹೇಳಿದ್ದಾರೆ.

”ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ಮಾತನಾಡಲು ನಾನು ಯಾರೂ ಅಲ್ಲ; ಮೇಲಾಗಿ ನಾನು ಕೇಂದ್ರ ಸರಕಾರದಲ್ಲಿ ಸಚಿವೆಯಾಗಿರುವುದರಿಂದ ಕೂಡ ನಾನು ಮಾತನಾಡುವಂತಿಲ್ಲ. ಆದರೆ ರಕ್ತದ ಕಲೆಗಳಿರುವ ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋದರೆ ಹೇಗೆ ಎಂಬ ಸಾಮಾನ್ಯ ಪರಿಜ್ಞಾನ ಇರಬೇಕು. ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋಗಲು ನಮ್ಮಿಂದ ಸಾಧ್ಯವಿಲ್ಲ ಎಂದ ಮೇಲೆ ದೇವಸ್ಥಾನಕ್ಕೆ ಹೋಗುವುದು ಸರಿಯೇ? ನಮಗೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ಇದೆ. ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇಲ್ಲ ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ..”

”…ಹಾಗೆಯೇ ದೇವರ ಮನೆಯನ್ನು ಪ್ರವೇಶಿಸುವ ಹಕ್ಕಿನಲ್ಲಿ ಅದನ್ನು ಅಪವಿತ್ರ ಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಳ್ಳಬೇಕು; ನನಗೆ ದೇವಸ್ಥಾನದಲ್ಲಿ ಪೂಜಿಸುವ ಹಕ್ಕಿದೆ; ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಂಡು ದೇವಸ್ಥಾನದ ಪಾವಿತ್ರ್ಯವನ್ನು ಗೌರವಿಸಬೇಕು” ಎಂದು ಸ್ಮ್ರತಿ ಇರಾನಿ ಹೇಳಿದರು.

”ನಾನೋರ್ವ ಹಿಂದು; ಆದರೆ ಮದುವೆಯಾದದ್ದು  ಝೊರಾಸ್ಟ್ರಿಯನ್‌ ನನ್ನು. ಹಾಗಾಗಿ ನನಗೆ ಅಗ್ನಿ ದೇವಳಕ್ಕೆ ನನಗೆ ಪ್ರವೇಶ ಇರಲಿಲ್ಲ; ನಾನು ಕುಟುಂಬ ಸಹಿತ ಅಲ್ಲಿಗೆ ಹೋಗಿದ್ದಾಗ ಮಕ್ಕಳನ್ನು ಗಂಡನ ಕೈಗೆ ಒಪ್ಪಿಸಿ, ನಾನು ಮಾತ್ರವೇ ದೇವಳದ ಹೊರಗೆ ಕಾರಿನಲ್ಲಿ ಕುಳಿತಿರಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದು ಸ್ಮ್ರತಿ  ಇರಾನಿ ಹೇಳಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago