ಮುಂಬಯಿ : ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಪ್ರವೇಶಾವಕಾಶ ನೀಡಿರುವುದಕ್ಕೆ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಕೇಂದ್ರ ಸಚಿವ ಸ್ಮ್ರತಿ ಇರಾನಿ ಅವರು “ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಹಕ್ಕೆಂದರೆ ದೇವಸ್ಥಾನವನ್ನು ಅಪವಿತ್ರಗೊಳಿಸುವ ಹಕ್ಕೆಂದು ತಿಳಿಯುವಂತಿಲ್ಲ” ಎಂದು ಹೇಳಿದ್ದಾರೆ.
”ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮಾತನಾಡಲು ನಾನು ಯಾರೂ ಅಲ್ಲ; ಮೇಲಾಗಿ ನಾನು ಕೇಂದ್ರ ಸರಕಾರದಲ್ಲಿ ಸಚಿವೆಯಾಗಿರುವುದರಿಂದ ಕೂಡ ನಾನು ಮಾತನಾಡುವಂತಿಲ್ಲ. ಆದರೆ ರಕ್ತದ ಕಲೆಗಳಿರುವ ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋದರೆ ಹೇಗೆ ಎಂಬ ಸಾಮಾನ್ಯ ಪರಿಜ್ಞಾನ ಇರಬೇಕು. ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋಗಲು ನಮ್ಮಿಂದ ಸಾಧ್ಯವಿಲ್ಲ ಎಂದ ಮೇಲೆ ದೇವಸ್ಥಾನಕ್ಕೆ ಹೋಗುವುದು ಸರಿಯೇ? ನಮಗೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ಇದೆ. ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇಲ್ಲ ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ..”
”…ಹಾಗೆಯೇ ದೇವರ ಮನೆಯನ್ನು ಪ್ರವೇಶಿಸುವ ಹಕ್ಕಿನಲ್ಲಿ ಅದನ್ನು ಅಪವಿತ್ರ ಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಳ್ಳಬೇಕು; ನನಗೆ ದೇವಸ್ಥಾನದಲ್ಲಿ ಪೂಜಿಸುವ ಹಕ್ಕಿದೆ; ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಂಡು ದೇವಸ್ಥಾನದ ಪಾವಿತ್ರ್ಯವನ್ನು ಗೌರವಿಸಬೇಕು” ಎಂದು ಸ್ಮ್ರತಿ ಇರಾನಿ ಹೇಳಿದರು.
”ನಾನೋರ್ವ ಹಿಂದು; ಆದರೆ ಮದುವೆಯಾದದ್ದು ಝೊರಾಸ್ಟ್ರಿಯನ್ ನನ್ನು. ಹಾಗಾಗಿ ನನಗೆ ಅಗ್ನಿ ದೇವಳಕ್ಕೆ ನನಗೆ ಪ್ರವೇಶ ಇರಲಿಲ್ಲ; ನಾನು ಕುಟುಂಬ ಸಹಿತ ಅಲ್ಲಿಗೆ ಹೋಗಿದ್ದಾಗ ಮಕ್ಕಳನ್ನು ಗಂಡನ ಕೈಗೆ ಒಪ್ಪಿಸಿ, ನಾನು ಮಾತ್ರವೇ ದೇವಳದ ಹೊರಗೆ ಕಾರಿನಲ್ಲಿ ಕುಳಿತಿರಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದು ಸ್ಮ್ರತಿ ಇರಾನಿ ಹೇಳಿದರು.
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…