ಬೆಂಗಳೂರು, : ಇಬ್ಬರು ಹೆಣ್ಣು ಮಕ್ಕಳಿಗೆ ಸಂವಿಧಾನಾತ್ಮಕವಾಗಿ ದೇಗುಲ ಪ್ರವೇಶಕ್ಕೆ ಮಾನ್ಯತೆ ಸಿಕ್ಕಿದೆ. ಹೀಗಾಗಿ ಹೆಣ್ಣು ಮಕ್ಕಳಿಗೆ ದೇವರನ್ನು ನೋಡುವ ಯೋಗ ಸಿಕ್ಕಿದ್ದರಿಂದ ಹೋಗಿದ್ದಾರೆ ಅಂತ ಸಚಿವೆ ಜಯಮಾಲಾ ಹೇಳಿದ್ದಾರೆ.
ಇವರು 50 ವರ್ಷಕ್ಕಿಂತ ಒಳಗಿನ ಇಬ್ಬರು ಮಹಿಳೆಯರು ಬುಧವಾರ ಮುಂಜಾನೆ ದೇಗುಲ ಪ್ರವೇಶಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಶಬರಿಮಲೆ ಪ್ರವೇಶಿಸಲು ಕಾನೂನಿನ ಪ್ರಕಾರವೇ ಅವರಿಗೆ ಅವಕಾಶ ದೊರಕಿದೆ. ಭಗವಂತನನ್ನು ನೋಡಲು ಅವರಿಬ್ಬರು ಪುಣ್ಯ ಮಾಡಿದ್ದಾರೆ ಎಂದಿದ್ದಾರೆ.
ಬಹುಸಂಖ್ಯೆಯಲ್ಲಿರುವ ಭಕ್ತರ ಮನಸ್ಸಿಗೆ ನೋವುಂಟು ಮಾಡಿ ಅಯ್ಯಪ್ಪ ದೇಗುಲ ಪ್ರವೇಶಿಸಿದ್ದು ಸರಿಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ, ಬಲತ್ಕಾರವಾಗಿ ಯಾವುದೋ ಬೇರೆ ಜನಾಂಗದವರು ದೇಗುಲವನ್ನು ಪ್ರವೇಶಿಸಿದಲ್ಲ.ಇದು ಭಕ್ತಿ ಮತ್ತು ದೇವರ ವಿಚಾರವಾಗಿದೆ , ಹಿಂದೂಗಳು ಹಿಂದೂ ದೇವಸ್ಥಾನಕ್ಕೆ ಹೋಗೋದರಲ್ಲಿ ತಪ್ಪೇನಿದೆ? ದೇವರನ್ನು ನೋಡಬೇಕು ಎಂಬ ಆಸೆಯಿಂದ ಅಲ್ಲಿಗೆ ಹೋಗಿದ್ದಾರೆ. ದೇವರ ಕೃಪೆಯೂ ಅವರ ಮೇಲಿತ್ತು. ಒಟ್ಟಿನಲ್ಲಿ ಕಾನೂನಾತ್ಮಕವಾಗಿ ಮಾನ್ಯತೆ ಸಿಕ್ಕಿದೆ. ಹೀಗಾಗಿ ಹೋಗಿದ್ದಾರೆ ಅಷ್ಟೇ. ಅವರು ಪುಣ್ಯ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…