ಶಬರಿಮಲೆ ವಿವಾದ : ಮಹಿಳೆಯರ ಪ್ರವೇಶ ವಿರೋಧಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು : ಜನಾರ್ದನ ಪೂಜಾರಿ
ಮಂಗಳೂರು, : ಶಬರಿಮಲೆಯಲ್ಲಿ ಎಲ್ಲಾ ಮಹಿಳೆಯರಿಗೂ ಪ್ರವೇಶ ನೀಡಲು ಕೇರಳ ಸರಕಾರ ಕಠಿಣ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಾಜಿ ಬಿ. ಜನಾರ್ದನ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸೋಮವಾರ ಕುದ್ರೋಳಿ ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಬರಿಮಲೆಯ ವಿಚಾರವನ್ನು ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ದುರುದ್ದೇಶವನ್ನಿಟ್ಟುಕೊಂಡು ಲಾಭಕ್ಕಾಗಿ ಇದಕ್ಕೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಅದು ಕಾಂಗ್ರೆಸ್ ,ಬಿಜೆಪಿ ಅಥವಾ ಇನ್ಯಾವುದೋ ಪಕ್ಷವಾಗಲಿ ಅಥವಾ ವ್ಯಕ್ತಿಯಾಗಲಿ ಮಹಿಳೆಯರ ಪ್ರವೇಶ ವಿರೋಧಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಈಗಾಗಲೇ ಶಬರಿಮಲೆಯಲ್ಲಿ ಮಹಿಳೆಯರು ಪ್ರವೇಶ ಮಾಡಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ. ಎಲ್ಲಾ ಮಹಿಳೆಯರನ್ನು ಪ್ರವೇಶ ಮಾಡಿಸಿ ಇದರಿಂದ ದೇವರು ಮೆಚ್ಚುತ್ತಾನೆ. ಮಹಿಳೆಯರು ಕೂಡಾ ದೇವರ ಮಕ್ಕಳಲ್ಲವೇ ? ಎಂದು ಪ್ರಶ್ನಿಸಿದ ಅವರು , ಅಯ್ಯಪ್ಪ ಮಹಿಳೆಯರ ಪ್ರವೇಶ ಬೇಡ ಎನ್ನಲಿಲ್ಲ. ವಿರೋಧಿಸುವವರು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ದ್ರೋಹ ಬಗೆಯದಂತೆ ಸಿಎಂ ತಮ್ಮ ಕರ್ತವ್ಯ ಪಾಲಿಸಿ ಎಲ್ಲಾ ಮಹಿಳೆಯರ ಪ್ರವೇಶಕ್ಕೆ ಅನುಕೂಲಕರ ವ್ಯವಸ್ಥೆ ಕಲ್ಪಿಸಲಿ ಎಂದು ಆಗ್ರಹಿಸಿದರು..
