ಮಂಗಳೂರು, : ಶಬರಿಮಲೆಯಲ್ಲಿ ಎಲ್ಲಾ ಮಹಿಳೆಯರಿಗೂ ಪ್ರವೇಶ ನೀಡಲು ಕೇರಳ ಸರಕಾರ ಕಠಿಣ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಾಜಿ ಬಿ. ಜನಾರ್ದನ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸೋಮವಾರ ಕುದ್ರೋಳಿ ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಬರಿಮಲೆಯ ವಿಚಾರವನ್ನು ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ದುರುದ್ದೇಶವನ್ನಿಟ್ಟುಕೊಂಡು ಲಾಭಕ್ಕಾಗಿ ಇದಕ್ಕೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಅದು ಕಾಂಗ್ರೆಸ್ ,ಬಿಜೆಪಿ ಅಥವಾ ಇನ್ಯಾವುದೋ ಪಕ್ಷವಾಗಲಿ ಅಥವಾ ವ್ಯಕ್ತಿಯಾಗಲಿ ಮಹಿಳೆಯರ ಪ್ರವೇಶ ವಿರೋಧಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಈಗಾಗಲೇ ಶಬರಿಮಲೆಯಲ್ಲಿ ಮಹಿಳೆಯರು ಪ್ರವೇಶ ಮಾಡಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ. ಎಲ್ಲಾ ಮಹಿಳೆಯರನ್ನು ಪ್ರವೇಶ ಮಾಡಿಸಿ ಇದರಿಂದ ದೇವರು ಮೆಚ್ಚುತ್ತಾನೆ. ಮಹಿಳೆಯರು ಕೂಡಾ ದೇವರ ಮಕ್ಕಳಲ್ಲವೇ ? ಎಂದು ಪ್ರಶ್ನಿಸಿದ ಅವರು , ಅಯ್ಯಪ್ಪ ಮಹಿಳೆಯರ ಪ್ರವೇಶ ಬೇಡ ಎನ್ನಲಿಲ್ಲ. ವಿರೋಧಿಸುವವರು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ದ್ರೋಹ ಬಗೆಯದಂತೆ ಸಿಎಂ ತಮ್ಮ ಕರ್ತವ್ಯ ಪಾಲಿಸಿ ಎಲ್ಲಾ ಮಹಿಳೆಯರ ಪ್ರವೇಶಕ್ಕೆ ಅನುಕೂಲಕರ ವ್ಯವಸ್ಥೆ ಕಲ್ಪಿಸಲಿ ಎಂದು ಆಗ್ರಹಿಸಿದರು..
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…