Featured

ಶಬರಿಮಲೆ ಸನ್ನಿಧಿಗೆ ಮಹಿಳೆಯ ಪ್ರವೇಶ ವಿರೋಧಿಸಿ, ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು, :ಶಬರಿಮಲೆಯ ಶ್ರೀ ಅಯ್ಯಪ್ಪ ಸನ್ನಿಧಿಗೆ ಮಹಿಳೆಯ ಪ್ರವೇಶ ವಿರೋಧಿಸಿ ಮಂಗಳೂರು ಅಯ್ಯಪ್ಪ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಬರಿಮಲೆ ಉಳಿಸಿ ಜಾಗೃತಿ ಸಮಾವೇಶ ನಗರದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ಭಾಗವಹಿಸಿದ್ದವು.

ಶಬರಿಮಲೆ ತೀರ್ಪಿನ ವಿರುದ್ಧ ಅ.9 ರಂದು ಮಂಗಳೂರಲ್ಲಿ ಬೃಹತ್ ಪ್ರತಿಭಟನೆ ಸಭೆಯಲ್ಲಿ ನೂರಾರು ಮಂದಿ ಮಹಿಳೆಯರು, ಅಯ್ಯಪ್ಪ ಸ್ವಾಮಿ ಭಕ್ತರು ಭಾಗವಹಿಸಿ ಸುಪ್ರೀಂ ಆದೇಶದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೈಯಲ್ಲಿ ಪ್ಲೆಕ್ ಕಾರ್ಡ್ ಗಳನ್ನು ಹಿಡಿದು ಸೇವ್ ಶಬರಿಮಲೆ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಅಯ್ಯಪ್ಪ ಸ್ವಾಮಿಯ ಶರಣು ಘೋಷ, ಭಕ್ತಿಗೀತೆಗಳನ್ನು ಹಾಡಲಾಯಿತು.

ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಹಿಂದೂ‌ ಸಂಘಟನೆ ಗಳ ಮುಖಂಡರು ಶಬರಿ ಮಲೆ ಅತ್ಯಂತ ಪರಿಶುದ್ಧ ಕ್ಷೇತ್ರವಾಗಿದೆ. ಮಹಿಳೆಯರ ಪ್ರವೇಶ ವಿಚಾರವನ್ನಿಟ್ಟುಕೊಂಡು ಹಿಂದೂ ಧರ್ಮ ಒಡೆಯುವ ಕೆಲಸವಾಗುತ್ತಿದೆ. ಕೇರಳ ಜನ ಈಗಾಗಲೇ ಆಂದೋಲನ ನಡೆಸುತ್ತಿದ್ದು, ಕೇರಳದ ಜನರ ಜೊತೆ ಮಂಗಳೂರಿಗರು ಕೈಜೋಡಿಸುವುದಾಗಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಕುರಿತು ರಾಷ್ಟ್ರಪತಿಗಳು ಹಾಗು ಪ್ರಧಾನಮಂತ್ರಿ ಮಧ್ಯಪ್ರವೇಶಿಸಿ ಜನರ ನಂಬಿಕೆಯನ್ನು ಉಳಿಸಬೇಕಾಗಿ ಮನವಿ ಮಾಡಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago