ಹೆಬ್ರಿ: ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದು, ನ.19ರ ಮಂಗಳವಾರ ಘಟನಾ ಸ್ಥಳಕ್ಕೆ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ರೂಪಾ ಮೌದ್ಗಿಲ್ ಭೇಟಿ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಕ್ಸಲರ ಚಲನವಲನದ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಕ್ಸಲರು ಮುಖಾಮುಖಿಯಾಗಿದ್ದಾರೆ. ಶರಣಾಗತಿಗೆ ಸೂಚನೆ ನೀಡಿದರೂ, ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ. ಈತನ ವಿರುದ್ದ ಕೊಲೆ, ಕಳ್ಳತನ, ದರೋಡೆ ಸಹಿತ 60 ಕ್ಕೂ ಅಧಿಕ ಪ್ರಕರಣಗಳಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸಹಿತ ಮೂರು ರಾಜ್ಯಗಳಿಗೆ ಬೇಕಾದ ನಕ್ಸಲ್ ವಿಕ್ರಂ ಗೌಡ. ನಕ್ಸಲ್ ನಿಗ್ರಹ ಪಡೆ ಪೊಲೀಸ್ ಅಧೀಕ್ಷಕ ಜಿತೇಂದ್ರ ದಯಾಮಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
10 ದಿನಗಳ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ. ಆಂತರಿಕ ವಿಭಾಗದ ಡಿಜಿಪಿ ಗಣಮೋಹನ್ ಪಿ. ಮಾರ್ಗದರ್ಶನ, ಗುಪ್ತಚರ ವಿಭಾಗ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಹಕಾರದಲ್ಲಿ ಕಾರ್ಯಾಚರಣೆ ನಡೆದಿದೆ. ಉಡುಪಿ ಜಿಲ್ಲೆಯಲಿ ಇದು 6ನೇ ನಕ್ಸಲ್ ಎನ್ ಕೌಂಟರ್ ಆಗಿದೆ.
ವಿಕ್ರಮ್ ಗೌಡನಿಗೆ 46 ವರ್ಷ ವಯಸ್ಸಾಗಿದ್ದು, ಕಬಿನಿ ದಳದ 2ನೇ ತಂಡವನ್ನು ಮುನ್ನಡೆಸುತ್ತಿದ್ದ. 4ನೇ ತರಗತಿ ವಿದ್ಯಾಭ್ಯಾಸ ಮಾತ್ರ ಪಡೆದಿದ್ದ ಎಂದು ಮಾಹಿತಿ ನೀಡಿದರು. ಎಎನ್ ಎಫ್ ಎಸ್ ಪಿ ಜಿತೇಂದ್ರ ದಯಾಮ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಅರುಣ್ ಇದ್ದರು.
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…