Featured

ಶರಣಾಗತಿಗೆ ಸೂಚಿಸಿದ್ದರೂ ದಾಳಿ ; ಎನ್‌ಕೌಂಟರ್‌ನಲ್ಲಿ ನಕ್ಸಲ್ ವಿಕ್ರಂ ಗೌಡ  ಮೃತ್ಯು : ಡಿಜಿಪಿ ರೂಪಾ – vishwanews24

ಎನ್‌ಕೌಂಟರ್ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ತಂಡ – ಪರಿಶೀಲನೆ

ಹೆಬ್ರಿ: ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದು, ನ.19ರ ಮಂಗಳವಾರ ‌ಘಟನಾ ಸ್ಥಳಕ್ಕೆ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ರೂಪಾ ಮೌದ್ಗಿಲ್ ಭೇಟಿ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಕ್ಸಲರ ಚಲನವಲನದ‌ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ‌ ನಕ್ಸಲರು ಮುಖಾಮುಖಿಯಾಗಿದ್ದಾರೆ. ಶರಣಾಗತಿಗೆ ಸೂಚನೆ ನೀಡಿದರೂ, ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ. ಈತನ ವಿರುದ್ದ ಕೊಲೆ, ಕಳ್ಳತನ, ದರೋಡೆ ಸಹಿತ 60 ಕ್ಕೂ ಅಧಿಕ ಪ್ರಕರಣಗಳಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸಹಿತ ಮೂರು ರಾಜ್ಯಗಳಿಗೆ ಬೇಕಾದ ನಕ್ಸಲ್ ವಿಕ್ರಂ ಗೌಡ. ನಕ್ಸಲ್ ನಿಗ್ರಹ ಪಡೆ ಪೊಲೀಸ್ ಅಧೀಕ್ಷಕ ಜಿತೇಂದ್ರ ದಯಾಮಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

10 ದಿನಗಳ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ. ಆಂತರಿಕ ವಿಭಾಗದ ಡಿಜಿಪಿ ಗಣಮೋಹನ್ ಪಿ. ಮಾರ್ಗದರ್ಶನ, ಗುಪ್ತಚರ ವಿಭಾಗ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಹಕಾರದಲ್ಲಿ ಕಾರ್ಯಾಚರಣೆ ನಡೆದಿದೆ. ಉಡುಪಿ ಜಿಲ್ಲೆಯಲಿ ಇದು 6ನೇ ನಕ್ಸಲ್ ಎನ್ ಕೌಂಟರ್ ಆಗಿದೆ.

ವಿಕ್ರಮ್ ಗೌಡನಿಗೆ 46 ವರ್ಷ ‌ವಯಸ್ಸಾಗಿದ್ದು, ಕಬಿನಿ ದಳದ 2ನೇ ತಂಡವನ್ನು ಮುನ್ನಡೆಸುತ್ತಿದ್ದ. 4ನೇ ತರಗತಿ ವಿದ್ಯಾಭ್ಯಾಸ ಮಾತ್ರ ಪಡೆದಿದ್ದ ಎಂದು ಮಾಹಿತಿ ನೀಡಿದರು. ಎಎನ್ ಎಫ್ ಎಸ್ ಪಿ ಜಿತೇಂದ್ರ ದಯಾಮ, ಉಡುಪಿ ಜಿಲ್ಲಾ ಪೊಲೀಸ್ ‌ಅಧೀಕ್ಷಕ ಡಾ| ಅರುಣ್ ಇದ್ದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago