ಶರಣಾಗಿದ್ದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ  – vishwanews24

Featured, ರಾಜ್ಯ ನ್ಯೂಸ್

ಶರಣಾದ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು:  ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ಮಂದಿ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ ಹೊರಡಿಸಿದೆ.

ಪಡುಬಿದ್ರಿ: ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ವ್ಯಕ್ತಿ ಸಾವು – vishwanews24

ಶರಣಾದ 6 ನಕ್ಸಲರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದ NIA ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರು ಪಡಿಸಿರುವ ಹಿನ್ನೆಲೆಯಲ್ಲಿ ಖುದ್ದು ಡಿಸಿಪಿ ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗಿತ್ತು.

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಶರಣಾದ ನಕ್ಸಲರಲ್ಲಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರಿದ್ದಾರೆ. ಅವರಲ್ಲಿ ತಮಿಳುನಾಡು ಮೂಲದ ವಸಂತ್ ಎಂಬಾತ ಬಿಟೆಕ್ ಪದವೀಧರನಾಗಿದ್ದಾನೆ. ಶರಣಾದವರಲ್ಲಿ ಶೃಂಗೇರಿಯ ಮುಂಡಗಾರು ಲತಾ, ರಾಯಚೂರಿನ ಮಾರೆಪ್ಪ ಅರೋಲಿ, ದಕ್ಷಿಣ ಕನ್ನಡದ ಸುಂದರಿ ಕೊತ್ಲೂರು, ಚಿಕ್ಕಮಗಳೂರಿನ ವನಜಾಕ್ಷಿ ಬಾಳೆಹೊಳೆ, ಕೇರಳ ಮೂಲದ ಜಿಶಾ ಸೇರಿದ್ದಾರೆ.

ಪಡುಬಿದ್ರಿ: ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ವ್ಯಕ್ತಿ ಸಾವು – vishwanews24

Leave a Reply