ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ಮಂದಿ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ಐಎ ಕೋರ್ಟ್ ಆದೇಶ ಹೊರಡಿಸಿದೆ.
ಶರಣಾದ 6 ನಕ್ಸಲರನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದ NIA ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ನಕ್ಸಲರನ್ನು ಕೋರ್ಟ್ಗೆ ಹಾಜರು ಪಡಿಸಿರುವ ಹಿನ್ನೆಲೆಯಲ್ಲಿ ಖುದ್ದು ಡಿಸಿಪಿ ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. ನಕ್ಸಲರನ್ನು ಕೋರ್ಟ್ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗಿತ್ತು.
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಶರಣಾದ ನಕ್ಸಲರಲ್ಲಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರಿದ್ದಾರೆ. ಅವರಲ್ಲಿ ತಮಿಳುನಾಡು ಮೂಲದ ವಸಂತ್ ಎಂಬಾತ ಬಿಟೆಕ್ ಪದವೀಧರನಾಗಿದ್ದಾನೆ. ಶರಣಾದವರಲ್ಲಿ ಶೃಂಗೇರಿಯ ಮುಂಡಗಾರು ಲತಾ, ರಾಯಚೂರಿನ ಮಾರೆಪ್ಪ ಅರೋಲಿ, ದಕ್ಷಿಣ ಕನ್ನಡದ ಸುಂದರಿ ಕೊತ್ಲೂರು, ಚಿಕ್ಕಮಗಳೂರಿನ ವನಜಾಕ್ಷಿ ಬಾಳೆಹೊಳೆ, ಕೇರಳ ಮೂಲದ ಜಿಶಾ ಸೇರಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…