Featured

ಶರಣಾದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ – vishwanews24

ಶರಣಾದ 6 ನಕ್ಸಲರ ಶಸ್ತ್ರಾಸ್ತ್ರಗಳು ಮೇಗೂರು ಅರಣ್ಯದಲ್ಲಿ ಪತ್ತೆ

ಚಿಕ್ಕಮಗಳೂರು: ಶರಣಾದ ಆರು ಮಂದಿ ನಕ್ಸಲರು ಬಳಸುತ್ತಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಚಿಕ್ಕಮಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೂತು ಇಟ್ಟಿದ್ದರು. ನಕ್ಸಲರು ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ ಸಭೆ ನಡೆಸಿ, ಬಳಿಕ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ಶರಣಾಗತಿ ವೇಳೆ ಶಸ್ತ್ರಾಸ್ತ್ರ ಹಸ್ತಾಂತರ ಬಗ್ಗೆ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಹುಡುಕಾಟ ನಡೆಸಿ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿದೆ. ನಕ್ಸಲರು ಶರಣಾಗುವ ಮುನ್ನ ಕೊನೆಯಬಾರಿಗೆ ಸಭೆ ನಡೆಸಿದ್ದ ಸ್ಥಳದಲ್ಲೇ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಒಂದು AK 56, ಮೂರು 303 ರೈಫಲ್, ಒಂದು 12 bore SBBL, ಒಂದು ಕಂಟ್ರಿ ಮೇಡ್ ಪಿಸ್ತೂಲ್ ಸೇರಿಂದತೆ ಒಟ್ಟು 6 ಬಂದೂಕು ಪತ್ತೆಯಾಗಿವೆ. ಜೊತೆಗೆ ಹನ್ನೊಂದು 7.62ಎಂಎಂ AK ammunitions , ೩೦೩ ಬಂದೂಕಿನ 133 ಗುಂಡುಗಳು ಸೇರಿದಂತೆ 176 ಜೀವಂತ ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ 25(1ಬಿ), 7 ಮತ್ತು 25(1ಎ) ಶಸ್ತ್ರಾಸ್ತ್ರ ಕಾಯ್ದೆ 1959 ಅಡಿ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago