ಶರಣಾದ 6 ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ  ಆಗ್ರಹ – vishwanews24

Featured, ರಾಜ್ಯ ನ್ಯೂಸ್

ಶರಣಾದ 6 ನಕ್ಸಲರ  ವಿರುದ್ಧ ಎನ್‍ ಐ ಎ  ತನಿಖೆಗೆ ಬಿಜೆಪಿ  ಆಗ್ರಹ

ಚಿಕ್ಕಮಗಳೂರು: ಶರಣಾದ 6 ನಕ್ಸಲರ  ವಿರುದ್ಧ ಎನ್‍ಐಎ  ತನಿಖೆ ನಡೆಸಬೇಕು ಎಂದು ಬಿಜೆಪಿ  ಆಗ್ರಹಿಸಿದೆ.

ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಗಿದೆ. ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ ಹಿಂದೆ 6 ಮಂದಿ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಅವರನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ.. ?: ಗೃಹ ಸಚಿವ ಪರಮೇಶ್ವರ್‌ – vishwanews24

ನಕ್ಸಲರನ್ನು ಶರಣಾಗತಿ ಕಮಿಟಿಯವರು ಈಗ ಹೇಗೆ ಭೇಟಿ ಮಾಡಿದ್ರು? ಪೊಲೀಸ್ ಇಲಾಖೆಗೆ ಈಗ ಬೆಲೆಯೇ ಇಲ್ವಾ? ಹಾಗಾದ್ರೆ, ಈ ಹಿಂದೆ ಎಲ್ಲಿದ್ದಾರೆ ಎಂಬ ಮಾಹಿತಿ ಗೊತ್ತಿರಲಿಲ್ವಾ? ಅಂದು ಏಕೆ ಪೊಲೀಸರಿಗೆ ಮಾಹಿತಿ ನೀಡಲಿಲ್ಲ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

ಶರಣಾಗತಿ ಬಳಿಕ ನಕ್ಸಲರು ಬಂದೂಕುಗಳನ್ನು ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಅತ್ಯಾಚಾರ ಪ್ರಕರಣ:ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್‌ – vishwanews24

Leave a Reply