Featured

ಶರಣ್‌ ಪಂಪ್ವೆಲ್‌  ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯ :  ಅಕ್ಷಿತ್‌ ಸುವರ್ಣ – Vishwanews24

ಶರಣ್‌ ಪಂಪ್ವೆಲ್‌  ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯ :  ಅಕ್ಷಿತ್‌ ಸುವರ್ಣ – Vishwanews24

ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್‌ ಪಂಪ್ವೆಲ್‌ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಹೇಳಿದ್ದಾರೆ.

ನಾರಾಯಣ ಗುರುಗಳ ತತ್ವದಡಿಯಲ್ಲಿ ಎಲ್ಲರೂ ಕೂಡ ಒಂದೇ ಜಾತಿ ಒಂದೇ ಧರ್ಮ ಎಂಬ ಧ್ಯೇಯದೊಂದಿಗೆ ಜಿಲ್ಲೆಯಲ್ಲಿ ಬಿಲ್ಲವ ಸಂಘಟನೆ ಕಾರ್ಯಾಚರಿಸುತ್ತಿದ್ದು ಯಾವುದೇ ರೀತಿಯ ಘರ್ಷಣೆ ಕಲಹಕ್ಕೆ ಅವಕಾಶ ಮಾಡಿಕೊಡದೆ ತನ್ನ ಪಾಡಿಗೆ ಸಮಾಜದ ಉದ್ದಾರಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಇತ್ತೀಚೆಗೆ ಬಜರಂಗದಳದ ನಾಯಕರಾಗಿರುವ ಶರಣ್‌ ಪಂಪ್ವೆಲ್‌ ಅವರು ಇನ್ನೊಂದು ಸಂಘಟನೆಯೊಂದಿಗೆ ನಡೆದಿರುವ ಮಾತಿನ ಕಲಹದ ವೇಳೆ ವಿನಾಕಾರಣ ಬಿಲ್ಲವ ಸಂಘಟನೆಯನ್ನು ಎಳೆದು ತಂದಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ.

ಬಿಲ್ಲವ ಸಂಘಟನೆ ಎಂದೂ ಕೂಡ ಯಾವುದೇ ಜಾತಿ ಧರ್ಮದ ವಿಚಾರದಲ್ಲಿ ಮೂಗು ತೂರಿಸದೇ ತನ್ನ ಸಮುದಾಯದ ಉದ್ದಾರಕ್ಕೆ ಶ್ರಮಿಸುತ್ತಿರುವಾಗ ತಮ್ಮ ವೈಯುಕ್ತಿಕ ದ್ವೇಷಕ್ಕೆ ಬಿಲ್ಲವ ಸಂಘಟನೆಯ ಹೆಸರನ್ನು ಬಳಸಿಕೊಂಡಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವಾಗ ಅನಾವಶ್ಯಕವಾಗಿ ಸಂಘಟನೆಗಳ ಹೆಸರನ್ನು ಬಳಸಿಕೊಂಡು ಸಮಾಜದಲ್ಲಿ ಘರ್ಷಣೆಗೆ ಕಾರಣವಾಗುವ ಪರಿಸ್ಥಿತಿ ಉಂಟಾಗುತ್ತದೆ ಎನ್ನುವುದನ್ನು ನಾಯಕರಾದವರು ಅರಿಯಬೇಕಾಗಿದೆ. ಇನ್ನಾದರೂ ಅನಾವಶ್ಯಕವಾಗಿ ಬಿಲ್ಲವ ಸಂಘಟನೆಯ ಹೆಸರನ್ನು ಇಲ್ಲ ಸಲ್ಲದ ವಿಚಾರಕ್ಕೆ ಎಳೆದು ತರುವುದನ್ನು ನಿಲ್ಲಿಸುವಂತೆ ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

22 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

22 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

24 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

24 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

24 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago