ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್ ಪಂಪ್ವೆಲ್ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ನಾರಾಯಣ ಗುರುಗಳ ತತ್ವದಡಿಯಲ್ಲಿ ಎಲ್ಲರೂ ಕೂಡ ಒಂದೇ ಜಾತಿ ಒಂದೇ ಧರ್ಮ ಎಂಬ ಧ್ಯೇಯದೊಂದಿಗೆ ಜಿಲ್ಲೆಯಲ್ಲಿ ಬಿಲ್ಲವ ಸಂಘಟನೆ ಕಾರ್ಯಾಚರಿಸುತ್ತಿದ್ದು ಯಾವುದೇ ರೀತಿಯ ಘರ್ಷಣೆ ಕಲಹಕ್ಕೆ ಅವಕಾಶ ಮಾಡಿಕೊಡದೆ ತನ್ನ ಪಾಡಿಗೆ ಸಮಾಜದ ಉದ್ದಾರಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಇತ್ತೀಚೆಗೆ ಬಜರಂಗದಳದ ನಾಯಕರಾಗಿರುವ ಶರಣ್ ಪಂಪ್ವೆಲ್ ಅವರು ಇನ್ನೊಂದು ಸಂಘಟನೆಯೊಂದಿಗೆ ನಡೆದಿರುವ ಮಾತಿನ ಕಲಹದ ವೇಳೆ ವಿನಾಕಾರಣ ಬಿಲ್ಲವ ಸಂಘಟನೆಯನ್ನು ಎಳೆದು ತಂದಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ.
ಬಿಲ್ಲವ ಸಂಘಟನೆ ಎಂದೂ ಕೂಡ ಯಾವುದೇ ಜಾತಿ ಧರ್ಮದ ವಿಚಾರದಲ್ಲಿ ಮೂಗು ತೂರಿಸದೇ ತನ್ನ ಸಮುದಾಯದ ಉದ್ದಾರಕ್ಕೆ ಶ್ರಮಿಸುತ್ತಿರುವಾಗ ತಮ್ಮ ವೈಯುಕ್ತಿಕ ದ್ವೇಷಕ್ಕೆ ಬಿಲ್ಲವ ಸಂಘಟನೆಯ ಹೆಸರನ್ನು ಬಳಸಿಕೊಂಡಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವಾಗ ಅನಾವಶ್ಯಕವಾಗಿ ಸಂಘಟನೆಗಳ ಹೆಸರನ್ನು ಬಳಸಿಕೊಂಡು ಸಮಾಜದಲ್ಲಿ ಘರ್ಷಣೆಗೆ ಕಾರಣವಾಗುವ ಪರಿಸ್ಥಿತಿ ಉಂಟಾಗುತ್ತದೆ ಎನ್ನುವುದನ್ನು ನಾಯಕರಾದವರು ಅರಿಯಬೇಕಾಗಿದೆ. ಇನ್ನಾದರೂ ಅನಾವಶ್ಯಕವಾಗಿ ಬಿಲ್ಲವ ಸಂಘಟನೆಯ ಹೆಸರನ್ನು ಇಲ್ಲ ಸಲ್ಲದ ವಿಚಾರಕ್ಕೆ ಎಳೆದು ತರುವುದನ್ನು ನಿಲ್ಲಿಸುವಂತೆ ಅವರು ಆಗ್ರಹಿಸಿದ್ದಾರೆ.
ಇಂಧನ ದರ ಏರಿಕೆ : ಏರ್ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…
ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…
ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…
ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…
ಕೊಂಕಣ ರೈಲ್ವೆ ಮಾನ್ಸೂನ್ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…
ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್ಎಂಟೆ ನಿಲ್ದಾಣದಲ್ಲಿ ಪ್ಲಾಟ್ಫಾರಂ ವಿಸ್ತರಣಾ…