Featured

ಶವವಾಗಿ ಮಲಗಿದ್ದ ಮಗು ಜೀವಂತ ; ಅಂತ್ಯಸಂಸ್ಕಾರದ ವೇಳೆ ಉಸಿರಾಡಿದ ಮಗು…..Vishwanews24

ಅಂತ್ಯಸಂಸ್ಕಾರದ ವೇಳೆ ಉಸಿರಾಡಿದ ಮಗು

ಶವವಾಗಿ ಮಲಗಿದ್ದ ಮಗು ಜೀವಂತ….

ಹರಿಯಾಣ, : ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಸಾವನ್ನಪಿರುವುದಾಗಿ ಎಂದು ವೈದ್ಯರು ಘೋಷಿಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದು, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಂತೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿದ್ದು ಈ ವೇಳೆ ಶವವಾಗಿ ಮಲಗಿದ್ದ ಮಗುವಿನ ದೇಹದಲ್ಲಿ ದಿಢೀರ್​ ಚಲನೆ ಉಂಟಾದ ಘಟನೆ ಹರಿಯಾಣದ ಜಜ್ಜಾರ್​ ಜಿಲ್ಲೆಯಲ್ಲಿ ನಡೆದಿದೆ.

ಹಿತೇಶ್​ ಎಂಬುವವರ 7 ವರ್ಷದ ಮಗ ಕುನಾಲ್​ ಶರ್ಮಾನಿಗೆ ಕಳೆದ ತಿಂಗಳು ಟೈಫಾಯಿಡ್​ ಜ್ವರ ಕಾಣಿಸಿಕೊಂಡು ತೀವ್ರ ಅಸ್ವಸ್ಥನಾಗಿದ್ದ ಕುನಾಲ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿ ಸ್ಪಲ್ಪ ದಿನದ ಬಳಿಕ ಮಗು ಮೃತಪಟ್ಟಿದೆ ಎಂದು ದೆಹಲಿ ವೈದ್ಯರು ಘೋಷಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಸ್ವಗ್ರಾಮಕ್ಕೆ ಮೃತದೇಹ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಇದೀಗ ಜೀವಂತವಾಗಿದೆ.

ಮಗುವಿನ ತಾಯಿಯು ಮಗನ ದೇಹನ್ನೆಲ್ಲ ಸವರುತ್ತಾ ಎಳೆದಾಡಿದ್ದು, ಆ ವೇಳೆ ಆತನ ದೇಹದಲ್ಲಿ ಚಲನೆ ಕಂಡು ಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಬಾಯಿಗೆ ಬಾಯಿ ಇಟ್ಟು ಉಸಿರು ಕೊಟ್ಟರು. ಆಗ ಮಗನ ದೇಹದಲ್ಲಿ ಮತ್ತಷ್ಟು ಮತ್ತಷ್ಟು ಚಲನ ಕಂಡು ಬಂದಿದ್ದು, ಎದೆಯ ಬಡಿತವೂ ಶುರುವಾಯಿತು.

ಇನ್ನು ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದು,. ಪರೀಕ್ಷಿಸಿದ ವೈದ್ಯರು, ಮಗು ಬದುಕುವ ಸಾಧ್ಯತೆ ಶೇ.15 ಮಾತ್ರ ಎಂದು ಹೇಳಿದರೂ ಪಾಲಕರು ಚಿಕಿತ್ಸೆ ಕೊಡಲು ಹೇಳಿದ್ದರು.

20 ದಿನಗಳ ಕಾಲ ಚಿಕಿತ್ಸೆ ಕೊಟ್ಟಿದ್ದು, ಪವಾಡ ಎಂಬಂತೆ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಮನೆಯಲ್ಲಿ ಆರಾಮಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

6 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago