ದಕ್ಷಿಣ ಕನ್ನಡ

ಶಶಿರಾಜ್ ಶೆಟ್ಟಿ ಕೊಳಂಬೆ ಸಹಿತ ನೂರಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ..

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಉತ್ತರ ಪ್ರದೇಶದ ಗ್ರಾಮೀಣ ಅಭಿವೃದ್ಧಿ ಸಚಿವ ಡಾ| ಮಹೇಂದ್ರ ಸಿಂಗ್‌ ಅವರು ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡರು. ಪಕ್ಷದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಸೇರಿದಂತೆ ಪಕ್ಷದ ವಿವಿಧ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಪಕ್ಷಕ್ಕೆ ಸೇರ್ಪಡೆಗೊಂಡ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ, ವಾರ್ಡ್ ಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸಲಾರಂಭಿಸಿದೆ. ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತ ಹಲವು ಮಂದಿ ಬಿಜೆಪಿಯನ್ನು ಸೇರಿಕೊಳ್ಳುತ್ತಿದ್ದಾರೆ. ಬರುವ ಪ್ರತಿಯೊಬ್ಬರನ್ನು ಬಿಜೆಪಿ ಪ್ರೀತ್ಯಾಧಾರಗಳಿಂದ ನೋಡಿಕೊಳ್ಳಲಿದೆ ಎಂದರು.

ಬಂಟ್ವಾಳದಲ್ಲಿ ರಮಾನಾಥ ರೈ ಅವರು, ತಾನು ಬೆಳೆದದ್ದು ಬಿಟ್ಟರೆ ಬೇರೊಬ್ಬ ನಾಯಕನನ್ನು ಬೆಳೆಸಿಲ್ಲ. ಅಲ್ಪಸಂಖ್ಯಾಕರ ಪರ ವಹಿಸಿ ಮಾತನಾಡುವ ಅವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ. ಅಲ್ಪಸಂಖ್ಯಾಕ ನಾಯಕರನ್ನೂ ಬೆಳೆಸಲು ಸಾಧ್ಯವಾಗಿಲ್ಲ. ಇದರಿಂದ ಬೇಸತ್ತ ಅಲ್ಪ ಸಂಖ್ಯಾಕ ಮಂದಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಯತ್ತ ಬರುತ್ತಿದ್ದಾರೆ ಎಂದರು.

ಪುನರ್‌ ಪರಿಶೀಲಿಸುವ ವಿಶ್ವಾಸ
ಶಶಿರಾಜ್‌ ಶೆಟ್ಟಿ ಕೊಳಂಬೆ ಮಾತನಾಡಿ, ಕಾಂಗ್ರೆಸ್‌ನ ಸ್ವಜನ ಪಕ್ಷಪಾತಕ್ಕೆ ಬೇಸತ್ತು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ದೇಶ ಪ್ರೇಮ, ಧರ್ಮಪ್ರೇಮ ಹೊಂದಿರುವ ಬಿಜೆಪಿಯೊಂದಿಗೆ ಕೆಲಸ ಮಾಡುವುದರೊಂದಿಗೆ ಕಾಂಗ್ರೆಸ್‌ ಮುಕ್ತ ದಕ್ಷಿಣ ಕನ್ನಡ ಜಿಲ್ಲೆಗಾಗಿ ನಾನು ಪಣತೊಡುತ್ತಿದ್ದೇನೆ. ಬಿಜೆಪಿ ಸರಕಾರ ಆಡಳಿತಕ್ಕೆ ಬಂದಲ್ಲಿ ಎತ್ತಿನಹೊಳೆ ಯೋಜನೆಯನ್ನು ಪುನರ್‌ ಪರಿಶೀಲಿಸುವ ವಿಶ್ವಾಸವಿದೆ ಎಂದರು.

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಮೋನಪ್ಪ ಭಂಡಾರಿ, ಬಿಜೆಪಿ ಮುಖಂಡರಾದ ರುಕ್ಮಯ ಪೂಜಾರಿ, ಸುಲೋಚನಾ ಜಿ.ಕೆ. ಭಟ್‌, ಹರಿಕೃಷ್ಣ ಬಂಟ್ವಾಳ್‌, ರವಿಶಂಕರ ಮಿಜಾರು, ಸುದರ್ಶನ ಮೂಡುಬಿದಿರೆ ಮುಂತಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

4 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago