Featured

ಶಶಿ ತರೂರ್‌, ಮನೀಶ್‌ ತಿವಾರಿ ಪೈಕಿ ಒಬ್ಬರಿಗೆ ಕಾಂಗ್ರೆಸ್‌ ಸಂಸದೀಯ ನಾಯಕನ ಪಟ್ಟ !  -Vishwanews24

ಶಶಿ ತರೂರ್‌, ಮನೀಶ್‌ ತಿವಾರಿ ಪೈಕಿ ಒಬ್ಬರಿಗೆ ಕಾಂಗ್ರೆಸ್‌ ಸಂಸದೀಯ ನಾಯಕನ ಪಟ್ಟ !  -Vishwanews24

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನವೇ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕನ ಬದಲಾವಣೆ ಬಹುತೇಕ ಖಚಿತವಾಗಿದೆ.

ಈ ಸ್ಥಾನಕ್ಕೆ ಶಶಿ ತರೂರ್‌ ಹಾಗೂ ಮನೀಶ್‌ ತಿವಾರಿ ಹೆಸರು ಬಲವಾಗಿ ಕೇಳಿಬಂದಿದೆ. ಇವರಿಬ್ಬರೂ ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದಿರುವ ‘ಜಿ-23’ ಗುಂಪಿನಲ್ಲಿದ್ದವರು ಎನ್ನುವುದು ಗಮನಾರ್ಹ. ಗೌರವ್‌ ಗೊಗೊಯ್‌, ರಣವೀತ್‌ ಸಿಂಗ್‌ ಬಿಟ್ಟೂ, ಉತ್ತಮ್‌ಕುಮಾರ್‌ ರೆಡ್ಡಿ ಹೆಸರು ಸಹ ಹೈಕಮಾಂಡ್‌ ಪರಿಶೀಲನೆಯಲ್ಲಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒಲವು ಗಳಿಸುವ ಉದ್ದೇಶದಿಂದ ಅಧೀರ್‌ರಂಜನ್‌ ಚೌಧರಿ ಬದಲಿಗೆ ಬೇರೊಬ್ಬರನ್ನು ಸಂಸದೀಯ ನಾಯಕ ಸ್ಥಾನಕ್ಕೆ ನೇಮಕ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ.

19ರಿಂದ ಸಂಸತ್‌ ಅಧಿವೇಶನ; ಈ ಸಲ ಏಕಕಾಲದಲ್ಲಿ ಕಲಾಪ

ಸಂಸತ್‌ನ ಮುಂಗಾರು ಅಧಿವೇಶನ ಜುಲೈ 19ರಿಂದ ಆಗಸ್ಟ್‌ 13ರವರೆಗೆ ನಡೆಯಲಿದೆ ಎಂದು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಾರಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳು ಏಕಕಾಲದಲ್ಲಿ ನಡೆಯಲಿವೆ. ನಿತ್ಯ ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗಲಿದೆ ಎಂದು ತಿಳಿಸಿದರು.

ಕೊರೊನಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಲೋಕಸಭೆ ಸದಸ್ಯರ ಪೈಕಿ 323 ಮಂದಿ ಕೊರೊನಾ ನಿರೋಧಕ ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೆ, 23 ಜನ ವೈದ್ಯಕೀಯ ಕಾರಣಗಳಿಂದ ಒಂದೂ ಡೋಸ್‌ ಪಡೆದಿಲ್ಲ. ಉಳಿದವರು ಒಂದು ಡೋಸ್‌ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಕೊರೊನಾ ಕಾರಣದಿಂದ ಮುಂಗಾರು ಮತ್ತು ಬಜೆಟ್‌ ಅಧಿವೇಶನಗಳಲ್ಲಿ ಉಭಯ ಸದನಗಳ ಕಲಾಪವನ್ನು ಪಾಳಿಯಲ್ಲಿ ನಡೆಸಲಾಗಿತ್ತು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

7 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

7 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

8 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

8 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

8 hours ago