ಹೊಸದಿಲ್ಲಿ: ಸಂಸತ್ನ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನವೇ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕನ ಬದಲಾವಣೆ ಬಹುತೇಕ ಖಚಿತವಾಗಿದೆ.
ಈ ಸ್ಥಾನಕ್ಕೆ ಶಶಿ ತರೂರ್ ಹಾಗೂ ಮನೀಶ್ ತಿವಾರಿ ಹೆಸರು ಬಲವಾಗಿ ಕೇಳಿಬಂದಿದೆ. ಇವರಿಬ್ಬರೂ ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದಿರುವ ‘ಜಿ-23’ ಗುಂಪಿನಲ್ಲಿದ್ದವರು ಎನ್ನುವುದು ಗಮನಾರ್ಹ. ಗೌರವ್ ಗೊಗೊಯ್, ರಣವೀತ್ ಸಿಂಗ್ ಬಿಟ್ಟೂ, ಉತ್ತಮ್ಕುಮಾರ್ ರೆಡ್ಡಿ ಹೆಸರು ಸಹ ಹೈಕಮಾಂಡ್ ಪರಿಶೀಲನೆಯಲ್ಲಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒಲವು ಗಳಿಸುವ ಉದ್ದೇಶದಿಂದ ಅಧೀರ್ರಂಜನ್ ಚೌಧರಿ ಬದಲಿಗೆ ಬೇರೊಬ್ಬರನ್ನು ಸಂಸದೀಯ ನಾಯಕ ಸ್ಥಾನಕ್ಕೆ ನೇಮಕ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.
19ರಿಂದ ಸಂಸತ್ ಅಧಿವೇಶನ; ಈ ಸಲ ಏಕಕಾಲದಲ್ಲಿ ಕಲಾಪ
ಸಂಸತ್ನ ಮುಂಗಾರು ಅಧಿವೇಶನ ಜುಲೈ 19ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಾರಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳು ಏಕಕಾಲದಲ್ಲಿ ನಡೆಯಲಿವೆ. ನಿತ್ಯ ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗಲಿದೆ ಎಂದು ತಿಳಿಸಿದರು.
ಕೊರೊನಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಲೋಕಸಭೆ ಸದಸ್ಯರ ಪೈಕಿ 323 ಮಂದಿ ಕೊರೊನಾ ನಿರೋಧಕ ಲಸಿಕೆಯ ಎರಡೂ ಡೋಸ್ ಪಡೆದಿದ್ದರೆ, 23 ಜನ ವೈದ್ಯಕೀಯ ಕಾರಣಗಳಿಂದ ಒಂದೂ ಡೋಸ್ ಪಡೆದಿಲ್ಲ. ಉಳಿದವರು ಒಂದು ಡೋಸ್ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಕೊರೊನಾ ಕಾರಣದಿಂದ ಮುಂಗಾರು ಮತ್ತು ಬಜೆಟ್ ಅಧಿವೇಶನಗಳಲ್ಲಿ ಉಭಯ ಸದನಗಳ ಕಲಾಪವನ್ನು ಪಾಳಿಯಲ್ಲಿ ನಡೆಸಲಾಗಿತ್ತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…