ಆಗ್ರಾ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುನರಾವರ್ತನೆಯಾದರೆ ಭಾರತ, ಹಿಂದೂ ಪಾಕಿಸ್ತಾನ ಆಗಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ ಅಲಿಘಡ ಮುಸ್ಲಿಂ ಯುವ ಮಂಡಳಿ ಅಧ್ಯಕ್ಷ ಮೊಹಮ್ಮದ್ ಆಮೀರ್ ರಶೀದ್, ತರೂರ್ ಅವರ ಮುಖಕ್ಕೆ ಮಸಿ ಬಳಿಯುವವರಿಗೆ ₹ 11 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
‘ಕಾಂಗ್ರೆಸ್ ನಾಯಕತ್ವದ ಬೆಂಬಲದೊಂದಿಗೆ ಹೊರಬಂದಿರುವ ಈ ಬೇಜವಾಬ್ದಾರಿ ಹೇಳಿಕೆಗೆ ಹಿಂದೂಗಳು ಮಾತ್ರವಲ್ಲ ದೇಶಭಕ್ತ ಮುಸ್ಲಿಮರಿಗೂ ನೋವಾಗಿದೆ. ಶ್ರೇಷ್ಠ ದೇಶದಲ್ಲಿ ಸಾಮರಸ್ಯದಿಂದ ಬದುಕುತ್ತಿರುವ ಹಿಂದೂ-ಮುಸ್ಲಿಮರನ್ನು ಒಡೆಯಲು ಪ್ರಯತ್ನಿಸಲಾಗುತ್ತಿದೆ’ ಎಂದು ರಶೀದ್ ಹೇಳಿದ್ದಾರೆ.
‘ಬಿಜೆಪಿ ಆಡಳಿತದಲ್ಲಿ ಭಾರತ ಅಭಿವೃದ್ಧಿ ಸಾಧಿಸುವುದನ್ನು ನೋಡಲು ಸಿದ್ಧವಿಲ್ಲದ ಕಾಂಗ್ರೆಸ್ಸಿನವರು ಅಧಿಕಾರ ಹಿಡಿಯುವುದಕ್ಕಾಗಿ ಎಂತಹದೇ ಹಾದಿ ತುಳಿಯಲು ಸಿದ್ಧವಾಗಿದ್ದಾರೆ’ ಎಂದು ಆರೋಪಿಸಿರುವ ಅವರು ಆರ್ಎಸ್ಎಸ್ ಸ್ವಯಂ ಸೇವಕನೂ ಹೌದು.
ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿದ್ದ ತರೂರ್, ಹಿಂದೂ ಪಾಕಿಸ್ತಾನ ಹೇಳಿಕೆ ನೀಡಿದ್ದರು. ಪ್ರಜಾಸತ್ತಾತ್ಮಕ ಸಂವಿಧಾನವನ್ನು ಬದಲಿಸಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗುವಂತಹ ಹೊಸ ಸಂವಿಧಾನ ಬರೆಯಲಾಗುವುದು ಎಂಬರ್ಥದಲ್ಲಿ ಮಾತನಾಡಿದ್ದರು.
ಈ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…