Featured

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ.. Vishwanews24

ಮಂಗಳಮುಖಿ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ..

ಅಹಮದಾಬಾದ್ : ಮಂಗಳಮುಖಿಯರು ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ.

ಪುರುಷರಾಗಿ ಪ್ರೌಢಾವಸ್ಥೆಗೆ ಬಂದವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆಯಾಗಿದ್ದರೂ ಮಹಿಳೆಯರೊಂದಿಗೆ ಕ್ರಿಕೆಟ್​ ಆಡುವಂತಿಲ್ಲ. ಆಟಗಾರ್ತಿಯರ ಸುರಕ್ಷತೆ ಮತ್ತು ಮಹಿಳಾ ಕ್ರಿಕೆಟ್​ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಸಿಸಿ ತಿಳಿಸಿದೆ.

ಕ್ರೀಡೆಗೆ ಸಂಬಂಧಿಸಿದ ವಿವಿಧ ವ್ಯಕ್ತಿ&ಸಂಸ್ಥೆಗಳ ಜತೆಗೆ 9 ತಿಂಗಳ ಕಾಲ ಸಮಗ್ರ ಚರ್ಚೆ ನಡೆಸಿದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಹೊಸ ಲಿಂಗ ಅರ್ಹತೆಯ ನಿಯಮಾವಳಿಯನ್ನು ಜಾರಿಗೆ ತರಲು ಐಸಿಸಿ ಮಂಡಳಿ ಸಮ್ಮತಿಸಿದೆ. 2028ರ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ಗೆ ಟಿ20 ಕ್ರಿಕೆಟ್​ ಸೇರ್ಪಡೆಗೊಂಡಿರುವುದು ಕೂಡ ಐಸಿಸಿ ಶೀಘ್ರವಾಗಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ಕಾರಣವಾಗಿದೆ ಎನ್ನಲಾಗಿದೆ.

ಕ್ರೀಡೆಯಲ್ಲಿ ಲಿಂಗ ಪರಿವರ್ತಿತರ ಪಾಲ್ಗೊಳ್ಳುವಿಕೆ ಕಳೆದ ಕೆಲ ವರ್ಷಗಳಿಂದ ಅತ್ಯಂತ ಚರ್ಚಾವಸ್ತುವಾಗಿದ್ದು, ಕ್ರಿಕೆಟ್​ ಕೂಡ ಈಗ ಒಲಿಂಪಿಕ್ಸ್​ ಕ್ರೀಡೆಯಾಗಿರುವುದರಿಂದ ಅದು ಈ ಬಗ್ಗೆ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳುವುದು ಅಗತ್ಯವಾಗಿತ್ತು. ಆದರೆ ದೇಶೀಯ ಕ್ರಿಕೆಟ್​ನಲ್ಲಿ ಲಿಂಗ ಪರಿವರ್ತಿತರಿಗೆ ಆಡಲು ಅವಕಾಶ ನೀಡುವ ಅಧಿಕಾರವನ್ನು ಐಸಿಸಿ, ಆಯಾ ದೇಶಗಳಿಗೆ ಬಿಟ್ಟಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿದ ಮೊದಲ ಮಂಗಳಮುಖಿ ಎನಿಸಿದ್ದ ಕೆನಡದ ಡೇನಿಯಲ್ ಮೆಕ್‌ಗಾಹೆ ಇನ್ನು ಮಹಿಳಾ ಕ್ರಿಕೆಟ್​ನಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ. ಡೇನಿಯಲ್ ಮೆಕ್‌ಗಾಹೆ ಮಹಿಳಾ ಕ್ರಿಕೆಟ್​ನಲ್ಲಿ ಇದುವರೆಗೆ 6 ಪಂದ್ಯ ಆಡಿದ್ದು, 118 ರನ್​ ಬಾರಿಸಿದ್ದಾರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago