Featured

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ.. Vishwanews24

ಮಂಗಳಮುಖಿ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ..

ಅಹಮದಾಬಾದ್ : ಮಂಗಳಮುಖಿಯರು ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ.

ಪುರುಷರಾಗಿ ಪ್ರೌಢಾವಸ್ಥೆಗೆ ಬಂದವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆಯಾಗಿದ್ದರೂ ಮಹಿಳೆಯರೊಂದಿಗೆ ಕ್ರಿಕೆಟ್​ ಆಡುವಂತಿಲ್ಲ. ಆಟಗಾರ್ತಿಯರ ಸುರಕ್ಷತೆ ಮತ್ತು ಮಹಿಳಾ ಕ್ರಿಕೆಟ್​ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಸಿಸಿ ತಿಳಿಸಿದೆ.

ಕ್ರೀಡೆಗೆ ಸಂಬಂಧಿಸಿದ ವಿವಿಧ ವ್ಯಕ್ತಿ&ಸಂಸ್ಥೆಗಳ ಜತೆಗೆ 9 ತಿಂಗಳ ಕಾಲ ಸಮಗ್ರ ಚರ್ಚೆ ನಡೆಸಿದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಹೊಸ ಲಿಂಗ ಅರ್ಹತೆಯ ನಿಯಮಾವಳಿಯನ್ನು ಜಾರಿಗೆ ತರಲು ಐಸಿಸಿ ಮಂಡಳಿ ಸಮ್ಮತಿಸಿದೆ. 2028ರ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ಗೆ ಟಿ20 ಕ್ರಿಕೆಟ್​ ಸೇರ್ಪಡೆಗೊಂಡಿರುವುದು ಕೂಡ ಐಸಿಸಿ ಶೀಘ್ರವಾಗಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ಕಾರಣವಾಗಿದೆ ಎನ್ನಲಾಗಿದೆ.

ಕ್ರೀಡೆಯಲ್ಲಿ ಲಿಂಗ ಪರಿವರ್ತಿತರ ಪಾಲ್ಗೊಳ್ಳುವಿಕೆ ಕಳೆದ ಕೆಲ ವರ್ಷಗಳಿಂದ ಅತ್ಯಂತ ಚರ್ಚಾವಸ್ತುವಾಗಿದ್ದು, ಕ್ರಿಕೆಟ್​ ಕೂಡ ಈಗ ಒಲಿಂಪಿಕ್ಸ್​ ಕ್ರೀಡೆಯಾಗಿರುವುದರಿಂದ ಅದು ಈ ಬಗ್ಗೆ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳುವುದು ಅಗತ್ಯವಾಗಿತ್ತು. ಆದರೆ ದೇಶೀಯ ಕ್ರಿಕೆಟ್​ನಲ್ಲಿ ಲಿಂಗ ಪರಿವರ್ತಿತರಿಗೆ ಆಡಲು ಅವಕಾಶ ನೀಡುವ ಅಧಿಕಾರವನ್ನು ಐಸಿಸಿ, ಆಯಾ ದೇಶಗಳಿಗೆ ಬಿಟ್ಟಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿದ ಮೊದಲ ಮಂಗಳಮುಖಿ ಎನಿಸಿದ್ದ ಕೆನಡದ ಡೇನಿಯಲ್ ಮೆಕ್‌ಗಾಹೆ ಇನ್ನು ಮಹಿಳಾ ಕ್ರಿಕೆಟ್​ನಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ. ಡೇನಿಯಲ್ ಮೆಕ್‌ಗಾಹೆ ಮಹಿಳಾ ಕ್ರಿಕೆಟ್​ನಲ್ಲಿ ಇದುವರೆಗೆ 6 ಪಂದ್ಯ ಆಡಿದ್ದು, 118 ರನ್​ ಬಾರಿಸಿದ್ದಾರೆ.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago