Featured

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ ಶಹಬಾಝ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶ ಗಂಗಾಧರ ಕೆ. ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ದೂರುದಾರರ ಪರವಾಗಿ ಸರಕಾರಿ ಅಭಿಯೋಜಕ ಆರ್.ಎ. ಗಡ್ಕರಿ ವಾದ ಮಂಡಿಸಿದರು. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳಾದ ಲಕ್ಷ್ಮಣ ದಡ್ಡಿ, ಸವೀನ ದಡ್ಡಿ, ಬಸವರಾಜ ದಡ್ಡಿ ಹಾಗೂ ಬಸವಣ್ಣಿ ನಾಯಕರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ಇದೇ ವೇಳೆ, ಇವರ ವಿರುದ್ಧ ಇಬ್ಬರ ಮೇಲಿನ ಕೊಲೆ ಯತ್ನ ಪ್ರಕರಣದ ಆರೋಪವೂ ಸಾಬೀತಾಗಿದೆ.

ಇದನ್ನೂ ಓದಿ : 

2020ರಲ್ಲಿ ನಡೆದ ಈ ಘಟನೆಯಲ್ಲಿ, ಶಹಬಾಝ್ ಪಠಾಣ್ ಸ್ನೇಹಿತನ ಜನ್ಮದಿನ ಕಾರ್ಯಕ್ರಮದಿಂದ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ವೇಳೆ, ಆರೋಪಿಗಳು ವಾಹನದ ಮೂಲಕ ಅವರ ಬೈಕಿಗೆ ಢಿಕ್ಕಿ ಹೊಡೆದು ದಾಳಿ ನಡೆಸಿದ್ದರು. ಪ್ರಾಣ ಉಳಿಸಿಕೊಳ್ಳಲು ಶಹಬಾಝ್ ಸಮೀಪದ ನಿವೃತ್ತ ಡಿವೈಎಸ್ಪಿಯವರ ಮನೆಗೆ ಓಡಿ ಹೋಗಿದ್ದರೂ, ಆರೋಪಿಗಳು ಅವರನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದರು.

ಗಂಭೀರವಾಗಿ ಗಾಯಗೊಂಡ ಶಹಬಾಝ್ ಪಠಾಣ್ ಸ್ಥಳದಲ್ಲೇ ಸಾವನ್ನಪ್ಪಿದರು.

ತನಿಖೆ ವೇಳೆ ಪೊಲೀಸರು 30 ಮಂದಿ ಸಾಕ್ಷಿದಾರರ ಹೇಳಿಕೆಗಳು ಮತ್ತು 128ಕ್ಕೂ ಹೆಚ್ಚು ದಾಖಲೆ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಮಂಡಿಸಿದ್ದರು. ಈ ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿದೆ.

ಇದನ್ನೂ ಓದಿ : 

ಇದಲ್ಲದೆ, ನ್ಯಾಯಾಲಯ ಆರೋಪಿಗಳಿಗೆ ಒಟ್ಟು 9.60 ಲಕ್ಷ ರೂ. ದಂಡ ವಿಧಿಸಿದ್ದು, ಅದರಲ್ಲಿ ಎಂಟು ಲಕ್ಷ ರೂ.ವನ್ನು ಮೃತ ಶಹಬಾಝ್ ಪಠಾಣ್ ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಹಾಗೂ 1.60 ಲಕ್ಷ ರೂ.ವನ್ನು ದೂರುದಾರರಿಗೆ ನೀಡಲು ಆದೇಶಿಸಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

8 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago