Judge and gavel in courtroom
ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ ಶಹಬಾಝ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶ ಗಂಗಾಧರ ಕೆ. ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ದೂರುದಾರರ ಪರವಾಗಿ ಸರಕಾರಿ ಅಭಿಯೋಜಕ ಆರ್.ಎ. ಗಡ್ಕರಿ ವಾದ ಮಂಡಿಸಿದರು. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳಾದ ಲಕ್ಷ್ಮಣ ದಡ್ಡಿ, ಸವೀನ ದಡ್ಡಿ, ಬಸವರಾಜ ದಡ್ಡಿ ಹಾಗೂ ಬಸವಣ್ಣಿ ನಾಯಕರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ಇದೇ ವೇಳೆ, ಇವರ ವಿರುದ್ಧ ಇಬ್ಬರ ಮೇಲಿನ ಕೊಲೆ ಯತ್ನ ಪ್ರಕರಣದ ಆರೋಪವೂ ಸಾಬೀತಾಗಿದೆ.
ಇದನ್ನೂ ಓದಿ :
2020ರಲ್ಲಿ ನಡೆದ ಈ ಘಟನೆಯಲ್ಲಿ, ಶಹಬಾಝ್ ಪಠಾಣ್ ಸ್ನೇಹಿತನ ಜನ್ಮದಿನ ಕಾರ್ಯಕ್ರಮದಿಂದ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ವೇಳೆ, ಆರೋಪಿಗಳು ವಾಹನದ ಮೂಲಕ ಅವರ ಬೈಕಿಗೆ ಢಿಕ್ಕಿ ಹೊಡೆದು ದಾಳಿ ನಡೆಸಿದ್ದರು. ಪ್ರಾಣ ಉಳಿಸಿಕೊಳ್ಳಲು ಶಹಬಾಝ್ ಸಮೀಪದ ನಿವೃತ್ತ ಡಿವೈಎಸ್ಪಿಯವರ ಮನೆಗೆ ಓಡಿ ಹೋಗಿದ್ದರೂ, ಆರೋಪಿಗಳು ಅವರನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದರು.
ಗಂಭೀರವಾಗಿ ಗಾಯಗೊಂಡ ಶಹಬಾಝ್ ಪಠಾಣ್ ಸ್ಥಳದಲ್ಲೇ ಸಾವನ್ನಪ್ಪಿದರು.
ತನಿಖೆ ವೇಳೆ ಪೊಲೀಸರು 30 ಮಂದಿ ಸಾಕ್ಷಿದಾರರ ಹೇಳಿಕೆಗಳು ಮತ್ತು 128ಕ್ಕೂ ಹೆಚ್ಚು ದಾಖಲೆ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಮಂಡಿಸಿದ್ದರು. ಈ ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿದೆ.
ಇದನ್ನೂ ಓದಿ :
ಇದಲ್ಲದೆ, ನ್ಯಾಯಾಲಯ ಆರೋಪಿಗಳಿಗೆ ಒಟ್ಟು 9.60 ಲಕ್ಷ ರೂ. ದಂಡ ವಿಧಿಸಿದ್ದು, ಅದರಲ್ಲಿ ಎಂಟು ಲಕ್ಷ ರೂ.ವನ್ನು ಮೃತ ಶಹಬಾಝ್ ಪಠಾಣ್ ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಹಾಗೂ 1.60 ಲಕ್ಷ ರೂ.ವನ್ನು ದೂರುದಾರರಿಗೆ ನೀಡಲು ಆದೇಶಿಸಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…