Featured

ಶಹಬ್ಬಾಶ್ ಮಗನೇ, ಮಗನಿಗೆ ಶಹಬ್ಬಾಶ್ ಎಂದ ಮಾಜಿ ಪ್ರಧಾನಿ ದೇವೇಗೌಡ! ಯಾಕೆ ಗೊತ್ತಾ ಓದಿ ಈ ವರದಿ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಮಗ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರಿಗೆ ಶಹಬ್ಬಾಶ್ ಅಂದಿದ್ದಾರೆ.

ಹೌದು. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಸಿದ್ದ ಕುಮಾರಸ್ವಾಮಿ ನಿರ್ಧಾರಕ್ಕೆ ದೊಡ್ಡಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಳ್ಳೆಯ ನಿರ್ಧಾರ ಅಂತ ಹೇಳುವ ಮೂಲಕ ಸೆಸ್ ಇಳಿಸಿರುವ ಕುರಿತು ಸರ್ಕಾರದ ಬೆನ್ನು ತಟ್ಟಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಜನರ ಮೇಲಿನ ಹಣದ ಹೊರೆಯನ್ನು ಕಡಿಮೆ ಮಾಡಿಕೊಡುವುದಾಗಿ ನರೇಂದ್ರ ಮೋದಿ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ದಿನನಿತ್ಯ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ದರ ಏರಿಕೆಯಾಗುತ್ತಿದೆ. ಸಾರ್ವಜನಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ರೇಟ್ ಮೇಲಿನ ಸೆಸ್ ಕಡಿತಗೊಳಿಸುತ್ತಿದೆ.

ಈ ಕುರಿತು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಲಬುರಗಿಯಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರ ರಚನೆ ಬಳಿಕ 40 ಸಾವಿರ ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಘೋಷಿಸಿದ್ದ ಎಚ್‍ಡಿಕೆ, ಅದಕ್ಕಾಗಿ ಹಣ ಹೊಂದಿಸಲು ಸೆಸ್ ಹೆಚ್ಚಿಸಿದ್ದರು. ಬಜೆಟ್ ನಲ್ಲಿ ಕುಮಾರಸ್ವಾಮಿ ಪೆಟ್ರೋಲ್ ಮೇಲಿನ ಸುಂಕವನ್ನು ಶೇ.30 ರಿಂದ ಶೇ.32ಕ್ಕೆ ಹೆಚ್ಚಿಸಿದ್ದರೆ ಡೀಸೆಲ್ ಮೇಲಿನ ಸುಂಕವನ್ನು ಶೇ.19 ರಿಂದ ಶೇ.21ಕ್ಕೆ ಏರಿಸಿದ್ದರು. ಆದರೆ ಬಂದ್ ದಿನವೇ ಸೆಸ್ ಇಳಿಸುವ ಸುಳಿವನ್ನು ನೀಡಿದ್ದರು. ಇದರಂತೆ ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ ಇಳಿಕೆಯಾಗಲಿದೆ.ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸರ್ಕಾರ ವಿಧಿಸುವ ಸೆಸ್ ಕಡಿಮೆಯಾದರೂ ತೈಲಬೆಲೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆಯಾಗಿರುವ ಕಾರಣ ಸೆಸ್ ಕಡಿಮೆ ಮಾಡಲು ಸಿಎಂ ತೀರ್ಮಾನಿಸಿದ್ದಾರೆ. ಇತ್ತ ತೈಲ ಬೆಲೆ ನಿತ್ಯ ಹೆಚ್ಚಾಗುತ್ತಿದ್ದು ಇಂದು ಕೂಡ ಲೀಟರ್ ಪೆಟ್ರೋಲ್‍ಗೆ 15 ಪೈಸೆ, ಡೀಸೆಲ್ 6 ಪೈಸೆಯಷ್ಟು ಹೆಚ್ಚಳವಾಗಿದೆ. ರಾಜಸ್ಥಾನ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಅನುಸರಿಸಿದ್ದು ರಾಜ್ಯದಲ್ಲೂ ಪೆಟ್ರೋಲ್ ಡೀಸೆಲ್ ದರ ಇಳಿಕೆ ಮಾಡಿದೆ.

 ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago