Featured

ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಇಟ್ಟರೆ, ನಾವು ಎರಡೆಜ್ಜೆ ಮುಂದಿಡುತ್ತೇವೆ: ಇಮ್ರಾನ್ ಖಾನ್

ಇಸ್ಲಾಮಾಬಾದ್: ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡುತ್ತೇವೆ ಎಂದು  ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರು  ಹೇಳಿದ್ದಾರೆ.
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಫಲಿತಾಂಶದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, 22 ವರ್ಷ ನಿರಂತರ ಹೋರಾಟದ ಬಳಿಕ ನನ್ನ ಪ್ರಯತ್ನಕ್ಕೆ ಫಲ ಸಿಕ್ಕಿದೆ. ದೇವರಿಗೆ ಹಾಗೂ ನನಗೆ ಮತ ನೀಡಿದ ಜನತೆಗೆ ಧನ್ಯವಾದ ಹೇಳುತ್ತೇನೆ ಎಂದರು.
ಕೆಲವು ದಿನಗಳ ಹಿಂದೆ, ಬಾಲಿವುಡ್ ಚಿತ್ರವೊಂದರಲ್ಲಿ ನನ್ನನ್ನು ಖಳನಾಯಕನಾಗಿ ಬಿಂಬಿಸಲಾಗಿರುವುದು ಭಾರತೀಯ ಮಾಧ್ಯಮಗಳಿಂದ ತಿಳಿದು ಬಂತು. ಆದರೆ ಭಾರತದೊಂದಿಗೆ ನಾನು ಉತ್ತಮ ಸಂಬಂಧ ಹೊಂದಲು ಬಯಸುತ್ತೇನೆ. ನಾವು ಬಡತನವನ್ನು ಕಿತ್ತುಹಾಕಬೇಕು ಎನ್ನುವದಾದರೆ ಭಾರತದೊಂದಿಗೆ ವ್ಯಾಪಾರ ಹೆಚ್ಚಿಸಿಕೊಳ್ಳಬೇಕು ಎಂದು ಪಾಕ್  ಪ್ರಧಾನಿ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ನಾವು ಪ್ರಜಾಪ್ರಭುತ್ವವನ್ನು ಬಲಪಡಿಸಬೇಕಾಗಿದೆ. ಹಲವು ಉಗ್ರ ದಾಳಿಗಳ ಹೊರತಾಗಿಯೂ ಚುನಾವಣಾ ಪ್ರಕ್ರಿಯೆ ಸಂಪೂರ್ಣ ಯಶಸ್ವಿಯಾಗಿದೆ. ಇದಕ್ಕಾಗಿ ನಾನು ನಮ್ಮ ಭದ್ರತಾ ಪಡೆಗಳಿಗೆ ಧನ್ಯವಾದ ಹೇಳುತ್ತೇನೆ ಎಂದರು.
ಬಡತನ ದೊಡ್ಡ ಸವಾಲಾಗಿದ್ದು, ನಾವು ಬಡತನದ ವಿರುದ್ಧ ಹೋರಾಡಬೇಕಾಗಿದೆ. ಇದಕ್ಕೆ ಚೀನಾವೇ ಅತ್ಯುತ್ತಮ ಉದಾಹರಣೆಯಾಗಿದೆ. ಚೀನಾ ಕಳೆದ 30 ವರ್ಷಗಳಲ್ಲಿ 70 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಇಂದು ಸ್ಥಿರತೆ ಇಲ್ಲದೆ ದೇಶ ಎಂದರೆ ಅದು ಪಾಕಿಸ್ತಾನ ಮಾತ್ರ. ಚೀನಾದಿಂದ ಹೆಚ್ಚು ಹೆಚ್ಚು ಬಂಡವಾಳ ಹೂಡಿಕೆಯಾಗಬೇಕಾಗಿದೆ ಮತ್ತು ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ನಮ್ಮ ವಿದೇಶಾಂಗ ನೀತಿಯನ್ನು ಬಲಪಡಿಸಬೇಕಾಗಿದೆ ಎಂದಿದ್ದಾರೆ.
ಪಾಕಿಸ್ತಾನದಲ್ಲಿ ಶಾಂತಿ ಮತ್ತು ಸ್ಥಿರತೆ ತರಲು ನಾನು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಅಫ್ಘಾನಿಸ್ತಾನದೊಂದಿಗೂ ಉತ್ತಮ ಸಂಬಂಧ ಹೊಂದುವ ವಿಶ್ವಾಸವಿದೆ ಎಂದರು.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

17 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

24 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

30 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

52 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago