Featured

ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಇಟ್ಟರೆ, ನಾವು ಎರಡೆಜ್ಜೆ ಮುಂದಿಡುತ್ತೇವೆ: ಇಮ್ರಾನ್ ಖಾನ್

ಇಸ್ಲಾಮಾಬಾದ್: ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡುತ್ತೇವೆ ಎಂದು  ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರು  ಹೇಳಿದ್ದಾರೆ.
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಫಲಿತಾಂಶದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, 22 ವರ್ಷ ನಿರಂತರ ಹೋರಾಟದ ಬಳಿಕ ನನ್ನ ಪ್ರಯತ್ನಕ್ಕೆ ಫಲ ಸಿಕ್ಕಿದೆ. ದೇವರಿಗೆ ಹಾಗೂ ನನಗೆ ಮತ ನೀಡಿದ ಜನತೆಗೆ ಧನ್ಯವಾದ ಹೇಳುತ್ತೇನೆ ಎಂದರು.
ಕೆಲವು ದಿನಗಳ ಹಿಂದೆ, ಬಾಲಿವುಡ್ ಚಿತ್ರವೊಂದರಲ್ಲಿ ನನ್ನನ್ನು ಖಳನಾಯಕನಾಗಿ ಬಿಂಬಿಸಲಾಗಿರುವುದು ಭಾರತೀಯ ಮಾಧ್ಯಮಗಳಿಂದ ತಿಳಿದು ಬಂತು. ಆದರೆ ಭಾರತದೊಂದಿಗೆ ನಾನು ಉತ್ತಮ ಸಂಬಂಧ ಹೊಂದಲು ಬಯಸುತ್ತೇನೆ. ನಾವು ಬಡತನವನ್ನು ಕಿತ್ತುಹಾಕಬೇಕು ಎನ್ನುವದಾದರೆ ಭಾರತದೊಂದಿಗೆ ವ್ಯಾಪಾರ ಹೆಚ್ಚಿಸಿಕೊಳ್ಳಬೇಕು ಎಂದು ಪಾಕ್  ಪ್ರಧಾನಿ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ನಾವು ಪ್ರಜಾಪ್ರಭುತ್ವವನ್ನು ಬಲಪಡಿಸಬೇಕಾಗಿದೆ. ಹಲವು ಉಗ್ರ ದಾಳಿಗಳ ಹೊರತಾಗಿಯೂ ಚುನಾವಣಾ ಪ್ರಕ್ರಿಯೆ ಸಂಪೂರ್ಣ ಯಶಸ್ವಿಯಾಗಿದೆ. ಇದಕ್ಕಾಗಿ ನಾನು ನಮ್ಮ ಭದ್ರತಾ ಪಡೆಗಳಿಗೆ ಧನ್ಯವಾದ ಹೇಳುತ್ತೇನೆ ಎಂದರು.
ಬಡತನ ದೊಡ್ಡ ಸವಾಲಾಗಿದ್ದು, ನಾವು ಬಡತನದ ವಿರುದ್ಧ ಹೋರಾಡಬೇಕಾಗಿದೆ. ಇದಕ್ಕೆ ಚೀನಾವೇ ಅತ್ಯುತ್ತಮ ಉದಾಹರಣೆಯಾಗಿದೆ. ಚೀನಾ ಕಳೆದ 30 ವರ್ಷಗಳಲ್ಲಿ 70 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಇಂದು ಸ್ಥಿರತೆ ಇಲ್ಲದೆ ದೇಶ ಎಂದರೆ ಅದು ಪಾಕಿಸ್ತಾನ ಮಾತ್ರ. ಚೀನಾದಿಂದ ಹೆಚ್ಚು ಹೆಚ್ಚು ಬಂಡವಾಳ ಹೂಡಿಕೆಯಾಗಬೇಕಾಗಿದೆ ಮತ್ತು ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ನಮ್ಮ ವಿದೇಶಾಂಗ ನೀತಿಯನ್ನು ಬಲಪಡಿಸಬೇಕಾಗಿದೆ ಎಂದಿದ್ದಾರೆ.
ಪಾಕಿಸ್ತಾನದಲ್ಲಿ ಶಾಂತಿ ಮತ್ತು ಸ್ಥಿರತೆ ತರಲು ನಾನು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಅಫ್ಘಾನಿಸ್ತಾನದೊಂದಿಗೂ ಉತ್ತಮ ಸಂಬಂಧ ಹೊಂದುವ ವಿಶ್ವಾಸವಿದೆ ಎಂದರು.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago