Featured

ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ  – vishwanews24

ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

ಉಡುಪಿ: ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಭಂಧಿಸಿದಂತೆ ಉಡುಪಿ ಎಸ್ ಪಿ ನೇತೃತ್ವದ ಪೊಲೀಸರ ತಂಡ ಅರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಅದರೆ ಸಮಾಜದಲ್ಲಿ ಆಶಾಂತಿಯನ್ನೇ ಬಯಸುವ ಕಿಡಿಗೇಡಿಗಳು ಮತ್ತೆ ಮತ್ತೆ ಅದೇ ವಿಚಾರದಲ್ಲಿ ಕೋಮು ಸೌಹರ್ದ ಕೆಡಿಸುವ ಕಾರ್ಯಕ್ಕೆ ಕೈ ಹಾಕಿರುವುದು ಶೋಚನೀಯ.

ಈ ಪ್ರಕರಣದಲ್ಲಿ ಹಲವು ಮಂದಿ ಬಂಧಿತರಾಗಿದ್ದರೂ ಕೂಡ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಜಿಲ್ಲೆಯಲ್ಲಿ ಆಶಾಂತಿ ಸೃಷ್ಟಿ ಮಾಡುವ ದೃಷ್ಟಿಯಲ್ಲಿ ಉಡುಪಿಗೆ ಆಗಮಿಸಿ ಅನಗತ್ಯ ಗೊಂದಲ ಹಾಗೂ ಕೋಮು ದ್ವೇಷಿ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆ ಸುರಕ್ಷಿತ ಹಾಗೂ ಪ್ರಜ್ಞಾವಂತರ ಜಿಲ್ಲೆ.ಇಲ್ಲಿನ ಜನ ಶಾಂತಿ ನೆಮ್ಮದಿಯನ್ನು ಬಯಸುತ್ತಾರೆ. ಅದರೆ ದಕ್ಷಿಣ ಕನ್ನಡದಲ್ಲಿ ಕೋಮು ದ್ವೇಷಗಳನ್ನು ಹರಡಿಸಿ ಶಾಂತಿ ಕದಡಿಸಿದ ಶರಣ್ ಪಂಪ್ ವೆಲ್ ಈಗ ಉಡುಪಿ ಜಿಲ್ಲೆಯಲ್ಲಿ ಕೋಮು ಸೌಹರ್ದ ಕೆಡಿಸಲು ತೊಡಗಿಸಿಕೊಂಡಿದ್ದು ಇದಕ್ಕೆ ಉಡುಪಿ ಜಿಲ್ಲೆ ಜನ ಬೆಂಬಲಿಸುವಿದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೋಮು ದ್ವೇಶ ಹರಡಿಸಿ ದಾಂಧಲೆ ಹಬ್ಬಿಸುವವರ ವಿರುದ್ದ ಕೋಮು ಹಿಂಸೆ ನಿಗ್ರಹ ದಳ ರಚನೆ ಮಾಡಿದೆ.ಈ ಕಾನೂನಿನ ಅಡಿಯಲಿಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಶರಣ್ ಪಂಪ್ ವೆಲ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಂಡು ,ಜಿಲ್ಲೆಯಲ್ಲಿ ಶಾಂತಿ ಸೌರ್ಹದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲಿ ಎಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago