Featured

ಶಾಂತಿ ಸ್ಥಾಪನೆಗೆ ಒಂದು ಅವಕಾಶ ಕೊಡಿ : ಪ್ರಧಾನಿಗೆ ಇಮ್ರಾನ್ ಮನವಿ – Vishwanews24

ಇಸ್ಲಾಮಾಬಾದ್: ಪುಲ್ವಾಮಾ ಭಯೋತ್ಪಾದಕ ದಾಳಿ ಬಗ್ಗೆ ಭಾರತ ಕ್ರಿಯಾಶೀಲ ಗುಪ್ತಚರ ಒದಗಿಸಿದರೆ ಪಾಕಿಸ್ತಾನ ತಕ್ಷಣವೇ ಅದಕ್ಕೆ ಪ್ರತಿಕ್ರಿಯೆ ನೀಡಲಿದೆ. ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಶಾಂತಿಗೆ ಒಂದು ಅವಕಾಶ ನೀಡಿ, ನಾನು ನನ್ನ ಮಾತನ್ನು ಉಳಿಸಿಕೊಳ್ಳುತ್ತೇನೆ. ಪುಲ್ವಾಮಾ ದಾಳಿಯ ಕುರಿತು ಭಾರತ ಸಾಕ್ಷ್ಯ ನೀಡಿದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸಿದ್ಧ ಎಂದು ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಜಸ್ತಾನದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದಾಗ, ಭಯೋತ್ಪಾದನೆ ವಿರುದ್ಧ ಇಡೀ ವಿಶ್ವದಲ್ಲಿ ಸಹಮತ ವ್ಯಕ್ತವಾಗಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಅದಕ್ಕೆ ಕುಮ್ಮಕ್ಕು ನೀಡುವವರನ್ನು ಶಿಕ್ಷಿಸಲು ನಾವು ಮುಂದಡಿ ಇಡುತ್ತಿದ್ದೇವೆ. ಈ ಬಾರಿ ಭಯೋತ್ಪಾದನೆ ವಿರುದ್ಧ ಹೋರಾಡುವ ಸೂಕ್ತ ಸಮಯ ಬಂದಿದೆ. ಭಾರತ ಬದಲಾಗುತ್ತಿದೆ. ಸೈನಿಕರು ಹುತಾತ್ಮರಾದ ನೋವನ್ನು ಮರೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ಧ ಹೇಗೆ ಹೋರಾಡಬೇಕೆಂದು ಮತ್ತು ಅದನ್ನು ಹೇಗೆ ಮಟ್ಟ ಹಾಕಬೇಕೆಂದು ನಮಗೆ ಗೊತ್ತಿದೆ ಎಂದು ಹೇಳಿದ್ದರು.
ನಾನು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ. ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ” ಎಂದು ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ.

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

7 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

8 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

8 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

9 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

9 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

9 hours ago