filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;
ಕಾಪು :- ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿ ರುವ ಉಡುಪಿ ಉಚ್ಚಿಲ ದಸರಾ – 2024ರ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ ಕಾರ್ಯಕ್ರಮ ಯಶಸ್ವಿಯಾಗಿ ಕಾಪುವಿನ ಕಡಲ ಕಿನಾರೆಯಲ್ಲಿ ನಡೆಯಿತು.
ಜಲಸ್ತಂಭನದ ಪೂರ್ವದಲ್ಲಿ ಕಾಶಿ ಗಂಗಾರತಿ ಮಾದರಿಯಲ್ಲಿ 10 ಬೃಹತ್ ಆರತಿಗಳೊಂದಿಗೆ ಮಹಾ ಮಂಗಳಾರತಿ ನಡೆದ ನಂತರ ಸೇರಿದ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಮಹಾಮಂಗಳಾರತಿ ನೆರವೇರಿದ ನಂತರ ಸಮುದ್ರದ ಮಧ್ಯೆ ಏಕಕಾಲದಲ್ಲಿ ನವದುರ್ಗೆ -ಶಾರದಾ ಮಾತೆ ಸಹಿತ ವಿಗ್ರಹಗಳ ಜಲಸ್ತಂಭನ ನಡೆಸಿದರು. ಈ ಸಂಧರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು.
ಶಾರದೆ ಮತ್ತು ನವದುರ್ಗೆಯರ ವಿಗ್ರಹಗಳನ್ನೊಳಗೊಂಡ 10 ಟ್ಯಾಬ್ಲೋ ಗಳ ಸಹಿತ ಸಾಮಾಜಿಕ ಜಾಗೃತಿ ಸಂದೇಶ ಸಾರುವ ಟ್ಯಾಬ್ಲೋಗಳು, ಭಜನೆ ತಂಡಗಳು, ತೆಯ್ಯಂ ಸಹಿತ ವಿವಿಧ ವೇಷಭೂಷಣಗಳು, ಹುಲಿ ವೇಷ, ಚೆಂಡೆ ಬಳಗ, ನಾಗಸ್ವರ, ವಾದ್ಯ ಸಹಿತ ನಾಸಿಕ್ ಬ್ಯಾಂಡ್ ತಂಡಗಳು ಹಾಗೂ 50ಕ್ಕೂ ಅಧಿಕ ಟ್ಯಾಬ್ಲೋ ಒಳಗೊಂಡ ಶೋಭಾ ಯಾತ್ರೆ ನಭೂತೋ ಎಂಬತ್ತೆ ನಡೆಯಿತು.
ದಸರಾ ರೂವಾರಿ ಡಾ| ಜಿ. ಶಂಕರ್, ಪ್ರಮುಖರಾದ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಗಿರಿಧರ ಸುವರ್ಣ, ವಿನಯ್ ಕರ್ಕೇರ,ಶಾಸಕ ಯಶ್ಪಾಲ್ ಸುವರ್ಣ,ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…