ಧಾರವಾಡ: ವಾಣಿಜ್ಯ ನಗರಿ ಮುಂಬೈನ ಐಷಾರಾಮಿ ಕಾರ್ಡಿಲಿಯಾ ಕ್ರೂಸ್ ಎಂಪ್ರೆಸ್ ಹಡಗಿನ ಒಳಗೆ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ತಂಡ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್, ಪುತ್ರ ಆರ್ಯನ್ ಖಾನ್ ಪರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲ ಕರ್ನಾಟಕ ಮೂಲದವರು.
ಶಾರುಖ್ ಪುತ್ರ ಆರ್ಯನ್ ಖಾನ್ ಕೇಸ್ ನಡಿಸ್ತಾ ಇರೋದು ಧಾರವಾಡ ಮೂಲದ ವಕೀಲ ಸತೀಶ ಮಾನೆಶಿಂಧೆ. ಇವರು ಸ್ಟಾರ್ ನಟರ ಕೇಸ್ ನಡಿಸೋ ಸ್ಟಾರ್ ಅಡ್ಟೋಕೇಟ್ ಎಂದೇ ಪರಿಚಿತರಾಗಿದ್ದಾರೆ. ಸಂಜಯ ದತ್, ಸಲ್ಮಾನ್ ಖಾನ್ ಮತ್ತು ರಿಯಾ ಚಕ್ರವರ್ತಿಗೆ ಜಾಮೀನು ಕೊಡಿಸಿರೋ ಖ್ಯಾತಿಯನ್ನು ಹೊಂದಿದ್ದಾರೆ.
ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ಸಿಲುಕಿದ್ದ ಸಂಜಯ ದತ್, ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ನಲ್ಲಿ ಸಿಲುಕಿದ್ದ ಸಲ್ಮಾನ್ ಖಾನ್ ಮತ್ತು ಸುಶಾಂತ್ ಸಿಂಗ್ ರಜಪುತ ಕೇಸ್ನಲ್ಲಿ ಸಿಲುಕಿದ್ದ ರಿಯಾ ಚಕ್ರವರ್ತಿ ಮೂವರಿಗೂ ಬಿಗ್ ರಿಲೀಫ್ ನೀಡಿದ್ದೇ ವಕೀಲ ಸತೀಶ ಮಾನೆಶಿಂಧೆ. ಈಗ ಶಾರೂಕ್ ಪುತ್ರನ ಪರ ವಾದ ಮಂಡಿಸುತ್ತಿದ್ದಾರೆ.
ಉಡುಪಿ : ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ – Vishwanews24
ಸರ್ಕಾರಿ ಶಾಲೆಗಳಲ್ಲಿಯೇ ಕಲಿತ ಸತೀಶ್ ಮಾನೆಶಿಂಧೆ ಇಂದು ರಾಷ್ಟ್ರ ಮಟ್ಟದಲ್ಲಿ ಬೆಳೆದಿರುವ ವಕೀಲರಾಗಿದ್ದಾರೆ. ಗದಗ, ರೋಣ, ವಿಜಯಪುರ, ಧಾರವಾಡ ಎಲ್ಲ ಕಡೆಯೂ ಸರ್ಕಾರಿ ಶಾಲೆ, ಸರ್ಕಾರಿ ಕಾಲೇಜ್ಗಳಲ್ಲಿಯೇ ಶಿಕ್ಷಣ ಮುಗಿಸಿದ್ದಾರೆ. ಗದಗ ಮತ್ತು ರೋಣ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವಿಜಯಪುರ ಸೈನಿಕ ಶಾಲೆಯಲ್ಲಿ ಪ್ರೌಢ ಮತ್ತು ಪಿಯು ಶಿಕ್ಷಣ. ಬಳಿಕ ಧಾರವಾಡದ ಕೆಸಿಡಿಯಲ್ಲಿ ಬಿಕಾಂ ಪದವಿ ಮತ್ತು ಸಿದ್ದಪ್ಪ ಕಂಬಳಿ ಲಾ ಕಾಲೇಜ್ನಲ್ಲಿ ಕಾನೂನು ಪದವಿ ಪಡೆದ ಬಳಿಕ ಮುಂಬೈಗೆ ಪ್ರಯಾಣ ಬೆಳೆಸಿದರು.
ಈಗ ಮಹಾರಾಷ್ಟ್ರದಲ್ಲೇ ಸುಪ್ರಸಿದ್ದ ಕ್ರಿಮಿನಲ್ ಲಾಯರ್ ಆಗಿದ್ದಾರೆ. ಮುಂಬೈ ಎನ್ ಕೌಂಟರ್ ಸ್ಪೆಷಾಲಿಸ್ಟ್ ದಯಾ ನಾಯಕ್ ಕೇಸ್ ಕೂಡಾ ಸತೀಶ್ ನಡೆಸುತ್ತಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…