ಧಾರವಾಡ: ವಾಣಿಜ್ಯ ನಗರಿ ಮುಂಬೈನ ಐಷಾರಾಮಿ ಕಾರ್ಡಿಲಿಯಾ ಕ್ರೂಸ್ ಎಂಪ್ರೆಸ್ ಹಡಗಿನ ಒಳಗೆ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ತಂಡ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್, ಪುತ್ರ ಆರ್ಯನ್ ಖಾನ್ ಪರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲ ಕರ್ನಾಟಕ ಮೂಲದವರು.
ಶಾರುಖ್ ಪುತ್ರ ಆರ್ಯನ್ ಖಾನ್ ಕೇಸ್ ನಡಿಸ್ತಾ ಇರೋದು ಧಾರವಾಡ ಮೂಲದ ವಕೀಲ ಸತೀಶ ಮಾನೆಶಿಂಧೆ. ಇವರು ಸ್ಟಾರ್ ನಟರ ಕೇಸ್ ನಡಿಸೋ ಸ್ಟಾರ್ ಅಡ್ಟೋಕೇಟ್ ಎಂದೇ ಪರಿಚಿತರಾಗಿದ್ದಾರೆ. ಸಂಜಯ ದತ್, ಸಲ್ಮಾನ್ ಖಾನ್ ಮತ್ತು ರಿಯಾ ಚಕ್ರವರ್ತಿಗೆ ಜಾಮೀನು ಕೊಡಿಸಿರೋ ಖ್ಯಾತಿಯನ್ನು ಹೊಂದಿದ್ದಾರೆ.
ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ಸಿಲುಕಿದ್ದ ಸಂಜಯ ದತ್, ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ನಲ್ಲಿ ಸಿಲುಕಿದ್ದ ಸಲ್ಮಾನ್ ಖಾನ್ ಮತ್ತು ಸುಶಾಂತ್ ಸಿಂಗ್ ರಜಪುತ ಕೇಸ್ನಲ್ಲಿ ಸಿಲುಕಿದ್ದ ರಿಯಾ ಚಕ್ರವರ್ತಿ ಮೂವರಿಗೂ ಬಿಗ್ ರಿಲೀಫ್ ನೀಡಿದ್ದೇ ವಕೀಲ ಸತೀಶ ಮಾನೆಶಿಂಧೆ. ಈಗ ಶಾರೂಕ್ ಪುತ್ರನ ಪರ ವಾದ ಮಂಡಿಸುತ್ತಿದ್ದಾರೆ.
ಉಡುಪಿ : ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ – Vishwanews24
ಸರ್ಕಾರಿ ಶಾಲೆಗಳಲ್ಲಿಯೇ ಕಲಿತ ಸತೀಶ್ ಮಾನೆಶಿಂಧೆ ಇಂದು ರಾಷ್ಟ್ರ ಮಟ್ಟದಲ್ಲಿ ಬೆಳೆದಿರುವ ವಕೀಲರಾಗಿದ್ದಾರೆ. ಗದಗ, ರೋಣ, ವಿಜಯಪುರ, ಧಾರವಾಡ ಎಲ್ಲ ಕಡೆಯೂ ಸರ್ಕಾರಿ ಶಾಲೆ, ಸರ್ಕಾರಿ ಕಾಲೇಜ್ಗಳಲ್ಲಿಯೇ ಶಿಕ್ಷಣ ಮುಗಿಸಿದ್ದಾರೆ. ಗದಗ ಮತ್ತು ರೋಣ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವಿಜಯಪುರ ಸೈನಿಕ ಶಾಲೆಯಲ್ಲಿ ಪ್ರೌಢ ಮತ್ತು ಪಿಯು ಶಿಕ್ಷಣ. ಬಳಿಕ ಧಾರವಾಡದ ಕೆಸಿಡಿಯಲ್ಲಿ ಬಿಕಾಂ ಪದವಿ ಮತ್ತು ಸಿದ್ದಪ್ಪ ಕಂಬಳಿ ಲಾ ಕಾಲೇಜ್ನಲ್ಲಿ ಕಾನೂನು ಪದವಿ ಪಡೆದ ಬಳಿಕ ಮುಂಬೈಗೆ ಪ್ರಯಾಣ ಬೆಳೆಸಿದರು.
ಈಗ ಮಹಾರಾಷ್ಟ್ರದಲ್ಲೇ ಸುಪ್ರಸಿದ್ದ ಕ್ರಿಮಿನಲ್ ಲಾಯರ್ ಆಗಿದ್ದಾರೆ. ಮುಂಬೈ ಎನ್ ಕೌಂಟರ್ ಸ್ಪೆಷಾಲಿಸ್ಟ್ ದಯಾ ನಾಯಕ್ ಕೇಸ್ ಕೂಡಾ ಸತೀಶ್ ನಡೆಸುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…