ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವದಹನವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ನಡೆದಿದೆ.
ರಾಗಯ್ಯ ಹಾಗೂ ಶಿಲ್ಪಾ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಮೃತಪಟ್ಟ ದುರ್ದೈವಿ. ದಂಪತಿ ಮನೆಯಲ್ಲಿಯೇ ಬಟ್ಟೆ ಅಂಗಡಿಯನ್ನೂ ಇಟ್ಟುಕೊಂಡಿದ್ದರು. ಸೋಮವಾರ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ತಗುಲಿತ್ತು. ಮನೆಯೊಳಗೆ ದಟ್ಟ ಹೊಗೆ ಅವರಿಸಿಕೊಂಡಿದ್ದರಿಂದ ದಂಪತಿ ಮನೆಯಿಂದ ಹೊರಬರಲಾರದೇ ಪರದಾಡಿ ಕೊನೆಗೆ ಬೆಂಕಿಗಾಹುತಿಯಾಗಿದ್ದಾರೆ.
ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅಜ್ಜ ಹಾಗೂ ಅಜ್ಜಿಯೊಂದಿಗೆ ಮನೆಯ ಕೆಳಮಹಡಿಯಲ್ಲಿ ಮಲಗಿದ್ದರು. ಇದರಿಂದಾಗಿ ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…