ಶಾಲಾರಂಭದ ಯಾವ ನಿರ್ಧಾರವೂ ಈವರೆಗೂ ತೆಗೆದುಕೊಂಡಿಲ್ಲ, ತರಾತುರಿಯಲ್ಲಿ ಶಾಲೆಗಳನ್ನು ಆರಂಭ ಮಾಡುವುದಿಲ್ಲ : ಶಿಕ್ಷಣ ಸಚಿವ ಸುರೇಶ್ ಕುಮಾರ್ -Vishwanews24

ಬೆಂಗಳೂರು : ರಾಜ್ಯದಲ್ಲಿ ಶಾಲೆ ಪುನರ್ ಆರಂಭ ಮಾಡುವ ಸಂಬಂಧ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಮಕ್ಕಳ ಸುರಕ್ಷತೆ, ಕಲಿಕೆ ಹಾಗೂ ಭವಿಷ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಜಾಸತ್ತಾತ್ಮಕವಾಗಿ ಮುಂದೆ ಸಾಗಲಿದ್ದೇವೆ. ತರಾತುರಿಯಲ್ಲಿನಿರ್ಧಾರ ಮಾಡಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

ಶಾಲಾರಾಂಭದ ಗೊಂದಲಕ್ಕೆ ಸಂಬಂಧಿಸಿದಂತೆ ಫೇಸ್‌ಬುಕ್‌ ಲೈವ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸದ್ಯ ಆರಂಭ ಮಾಡಬಾರದು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರುವ ವರೆಗೂ ಶಾಲೆ ಆರಂಭಿಸಬಾರದು ಎಂಬ ಆಗ್ರಹವೂ ಕೇಳಿ ಬರುತ್ತದೆ. ಇದರ ಜತೆಗೆ ಕೋವಿಡ್ ಪರಿಸ್ಥಿತಿ ಹೀಗೆ ದೀರ್ಘವಧಿಯವರೆಗೂ ಇರಲಿದೆ. ಆದ್ದರಿಂದ ಸಾಮಾಜಿಕ ಅಂತರ, ಮಾಸ್ಕ್ ಮೊದಲಾದ ಸುರಕ್ಷತಾ ಕ್ರಮದೊಂದಿಗೆ ಶಾಲೆ ಆರಂಭಿಸಬೇಕು ಎಂಬ ಮನವಿಯೂ ಬಂದಿದೆ. ಹೀಗಾಗಿ ಎಲ್ಲ ಅಂಶಗಳನ್ನು ಪರಿಶೀಲಿಸಿ, ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಯಾವುದೇ ರೀತಿಯ ಆತುರ ಅಥವಾ ತರಾತುರಿಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

ಜುಲೈ 1 ಅಥವಾ ಜುಲೈ15 ಶಾಲಾರಂಭದ ದಿನಾಂಕವಲ್ಲ. ಉದ್ದೇಶಿತ ದಿನಾಂಕವಷ್ಟೆ. ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಶಾಲೆಗಳಲ್ಲಿ ಪಾಲಕ, ಪೋಷಕರ ಮತ್ತು ಎಸ್ ಡಿಎಂಸಿ ಸದಸ್ಯರ ಹಾಗೂ ಪಾಲುದಾರರ ಸಭೆ ನಡೆಸಿ, ಅಲ್ಲಿ ಬರುವ ನಿರ್ಧಾರದ ಆಧಾರದಲ್ಲಿ ಮುಂದೆ ಸಾಗಲಿದ್ದೇವೆ. ಶಾಲಾರಂಭದ ಯಾವ ನಿರ್ಧಾರವೂ ಈವರೆಗೂ ತೆಗೆದುಕೊಂಡಿಲ್ಲ. ಹೀಗಾಗಿ ಪಾಲಕ, ಪೋಷಕರು ಆತಂಕಕ್ಕೆ ಒಳಗಾಗುವುದು ಬೇಡ ಎಂದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago