ಶಾಲಾ ಆವರಣದಲ್ಲಿ ಅಲ್ಲಾಡ್ಸು ಡ್ಯಾನ್ಸ್‌ ಮಾಡಿದವರು ಸರ್ಕಾರಿ ಶಾಲೆ ಶಿಕ್ಷಕರು ಅಲ್ಲ : ಸುರೇಶ್‌ ಕುಮಾರ್‌ ಸ್ಪಷ್ಟನೆ -Vishwanews24

ಬೆಂಗಳೂರು : ವಿವಾದಕ್ಕೆ ಕಾರಣವಾಗಿದ್ದ ಸರಕಾರಿ ಶಾಲಾ ಆವರಣದಲ್ಲಿ ಮಾಡಲಾಗಿದ್ದ ಅಲ್ಲಾಡ್ಸು ಡ್ಯಾನ್ಸ್‌ ತಿರುವು ಪಡೆದುಕೊಂಡಿದ್ದು ನೃತ್ಯ ಮಾಡಿದವರು ಯಾರೂ ಕಾಡಾ ಸರ್ಕಾರಿ ಶಾಲೆಯ ಶಿಕ್ಷಕರು ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಡಿಯೋ ಮೂಲಕ ಸುರೇಶ್‌ ಕುಮಾರ್‌ ಅವರೇ ಈ ಬಗ್ಗೆ ತಿಳಿಸಿದ್ದು, “ಈ ಪ್ರಕರಣದಲ್ಲಿ ಶಾಲಾ ಶಿಕ್ಷಕರದ್ದು ಯಾರದೂ ತಪ್ಪಿಲ್ಲ. ಶಾಲಾ ಆವರಣದಲ್ಲಿ ಮಹಿಳಾ ಸಂಘದವರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಹಿಳಾ ಸಂಘದವರು ಕಾರ್ಯಕ್ರಮದ ಕೊನೆಯಲ್ಲಿ ನೃತ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಶಾಲಾ ಆವರಣದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ಕೊಡಬಾರದು. ಆದರೆ ಮಹಿಳಾ ಸಂಘದವರು ಶಾಲೆಗೆ ಸಹಾಯ ಮಾಡಿರುವ ಹಿನ್ನಲೆಯಲ್ಲಿ ಆವರಣದಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ನೀಡಲಾಗಿದೆ ಎಂದು ತಿಳಿಸಿ‌ದ್ದಾರೆ.

ಮಹಿಳಾ ಸಂಘದವರು ಈ ಘಟನೆಗೆ ಸಂಬಂಧಿಸಿ ಕ್ಷಮಾಪಣಾ ಪತ್ರ ಬರೆದು ಕೊಟ್ಟಿದ್ದಾರೆ. ಶಾಲಾ ಅಭಿವೃದ್ಧಿ ಸಮಿತಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ಆವರಣದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಬಿಟ್ಟು ಅನ್ಯ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಬಾರದು. ಬೇರೆ ಕಾರ್ಯಕ್ರಮಗಳಿಗೆ ಶಾಲಾ ಆವರಣದಲ್ಲಿ ಅವಕಾಶ ಮಾಡಿಕೊಟ್ಟಲ್ಲಿ ಅದಕ್ಕೆ ಶಾಲಾ ಅಭಿವೃದ್ಧಿ ಸಮಿತಿ(SDMC) ಜವಾಬ್ದಾರಿಯಾಗುತ್ತದೆ. ಇಂತಹ ಘಟನೆಗಳು ಇನ್ನು ನಡೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

29 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

41 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago