ಬೆಂಗಳೂರು : ವಿವಾದಕ್ಕೆ ಕಾರಣವಾಗಿದ್ದ ಸರಕಾರಿ ಶಾಲಾ ಆವರಣದಲ್ಲಿ ಮಾಡಲಾಗಿದ್ದ ಅಲ್ಲಾಡ್ಸು ಡ್ಯಾನ್ಸ್ ತಿರುವು ಪಡೆದುಕೊಂಡಿದ್ದು ನೃತ್ಯ ಮಾಡಿದವರು ಯಾರೂ ಕಾಡಾ ಸರ್ಕಾರಿ ಶಾಲೆಯ ಶಿಕ್ಷಕರು ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಗುರುವಾರ ವಿಡಿಯೋ ಮೂಲಕ ಸುರೇಶ್ ಕುಮಾರ್ ಅವರೇ ಈ ಬಗ್ಗೆ ತಿಳಿಸಿದ್ದು, “ಈ ಪ್ರಕರಣದಲ್ಲಿ ಶಾಲಾ ಶಿಕ್ಷಕರದ್ದು ಯಾರದೂ ತಪ್ಪಿಲ್ಲ. ಶಾಲಾ ಆವರಣದಲ್ಲಿ ಮಹಿಳಾ ಸಂಘದವರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಹಿಳಾ ಸಂಘದವರು ಕಾರ್ಯಕ್ರಮದ ಕೊನೆಯಲ್ಲಿ ನೃತ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.
ಶಾಲಾ ಆವರಣದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ಕೊಡಬಾರದು. ಆದರೆ ಮಹಿಳಾ ಸಂಘದವರು ಶಾಲೆಗೆ ಸಹಾಯ ಮಾಡಿರುವ ಹಿನ್ನಲೆಯಲ್ಲಿ ಆವರಣದಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಹಿಳಾ ಸಂಘದವರು ಈ ಘಟನೆಗೆ ಸಂಬಂಧಿಸಿ ಕ್ಷಮಾಪಣಾ ಪತ್ರ ಬರೆದು ಕೊಟ್ಟಿದ್ದಾರೆ. ಶಾಲಾ ಅಭಿವೃದ್ಧಿ ಸಮಿತಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ಆವರಣದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಬಿಟ್ಟು ಅನ್ಯ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಬಾರದು. ಬೇರೆ ಕಾರ್ಯಕ್ರಮಗಳಿಗೆ ಶಾಲಾ ಆವರಣದಲ್ಲಿ ಅವಕಾಶ ಮಾಡಿಕೊಟ್ಟಲ್ಲಿ ಅದಕ್ಕೆ ಶಾಲಾ ಅಭಿವೃದ್ಧಿ ಸಮಿತಿ(SDMC) ಜವಾಬ್ದಾರಿಯಾಗುತ್ತದೆ. ಇಂತಹ ಘಟನೆಗಳು ಇನ್ನು ನಡೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…