ಶಾಲಾ ಆವರಣದಲ್ಲಿ ಅಲ್ಲಾಡ್ಸು ಡ್ಯಾನ್ಸ್‌ ಮಾಡಿದವರು ಸರ್ಕಾರಿ ಶಾಲೆ ಶಿಕ್ಷಕರು ಅಲ್ಲ : ಸುರೇಶ್‌ ಕುಮಾರ್‌ ಸ್ಪಷ್ಟನೆ -Vishwanews24

ಬೆಂಗಳೂರು : ವಿವಾದಕ್ಕೆ ಕಾರಣವಾಗಿದ್ದ ಸರಕಾರಿ ಶಾಲಾ ಆವರಣದಲ್ಲಿ ಮಾಡಲಾಗಿದ್ದ ಅಲ್ಲಾಡ್ಸು ಡ್ಯಾನ್ಸ್‌ ತಿರುವು ಪಡೆದುಕೊಂಡಿದ್ದು ನೃತ್ಯ ಮಾಡಿದವರು ಯಾರೂ ಕಾಡಾ ಸರ್ಕಾರಿ ಶಾಲೆಯ ಶಿಕ್ಷಕರು ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಡಿಯೋ ಮೂಲಕ ಸುರೇಶ್‌ ಕುಮಾರ್‌ ಅವರೇ ಈ ಬಗ್ಗೆ ತಿಳಿಸಿದ್ದು, “ಈ ಪ್ರಕರಣದಲ್ಲಿ ಶಾಲಾ ಶಿಕ್ಷಕರದ್ದು ಯಾರದೂ ತಪ್ಪಿಲ್ಲ. ಶಾಲಾ ಆವರಣದಲ್ಲಿ ಮಹಿಳಾ ಸಂಘದವರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಹಿಳಾ ಸಂಘದವರು ಕಾರ್ಯಕ್ರಮದ ಕೊನೆಯಲ್ಲಿ ನೃತ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಶಾಲಾ ಆವರಣದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ಕೊಡಬಾರದು. ಆದರೆ ಮಹಿಳಾ ಸಂಘದವರು ಶಾಲೆಗೆ ಸಹಾಯ ಮಾಡಿರುವ ಹಿನ್ನಲೆಯಲ್ಲಿ ಆವರಣದಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ನೀಡಲಾಗಿದೆ ಎಂದು ತಿಳಿಸಿ‌ದ್ದಾರೆ.

ಮಹಿಳಾ ಸಂಘದವರು ಈ ಘಟನೆಗೆ ಸಂಬಂಧಿಸಿ ಕ್ಷಮಾಪಣಾ ಪತ್ರ ಬರೆದು ಕೊಟ್ಟಿದ್ದಾರೆ. ಶಾಲಾ ಅಭಿವೃದ್ಧಿ ಸಮಿತಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ಆವರಣದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಬಿಟ್ಟು ಅನ್ಯ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಬಾರದು. ಬೇರೆ ಕಾರ್ಯಕ್ರಮಗಳಿಗೆ ಶಾಲಾ ಆವರಣದಲ್ಲಿ ಅವಕಾಶ ಮಾಡಿಕೊಟ್ಟಲ್ಲಿ ಅದಕ್ಕೆ ಶಾಲಾ ಅಭಿವೃದ್ಧಿ ಸಮಿತಿ(SDMC) ಜವಾಬ್ದಾರಿಯಾಗುತ್ತದೆ. ಇಂತಹ ಘಟನೆಗಳು ಇನ್ನು ನಡೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 second ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

9 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

15 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

39 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

45 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

55 minutes ago