ಬೆಂಗಳೂರು: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಈ ಬಗ್ಗೆ ಎರಡು ದಿನಗಳ ಹಿಂದಿಯೇ ಪಬ್ಲಿಕ್ ಟಿವಿ ಸುದ್ದಿ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…