Featured

ಶಾಲಾ ಕಾಲೇಜು ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ  ತುಂಬಿದ ನೂತನ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ -Vishwanews24

ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮಾರಾವ್ ಎಂ.ಅಧಿಕಾರ ಸ್ವೀಕಾರ..

ಶಾಲಾ ಕಾಲೇಜು ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ  ತುಂಬಿದ ನೂತನ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ -Vishwanews24

ಉಡುಪಿ: ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಕೆಯ ಜೊತೆಗೆ ಕೋವಿಡ್ ಸೋಂಕು ಹೋಗಲಾಡಿಸುವ ಕಾರ್ಯದಲ್ಲಿ ಕೈ-ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮ ರಾವ್ ವಿದ್ಯಾರ್ಥಿಗಳಿಗೆ ಸೂಚಿಸಿದರು.

ಅವರು ಜಿಲ್ಲೆಯಲ್ಲಿ ಇಂದಿನಿoದ 9 ಮತ್ತು 10 ನೇ ತರಗತಿ ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭಗೊoಡ ಹಿನ್ನೆಲೆ, ನಗರದ ಬಾಲಕಿಯರ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ, ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವ ಬಗ್ಗೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊoಡರು.

ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಪೋಷಕರು ಶಿಕ್ಷಕರ ಮೇಲೆ ನಂಬಿಕೆಯನ್ನಿಟ್ಟು ಒಪ್ಪಿಗೆ ಪತ್ರವನ್ನು ನೀಡುವುದರೊಂದಿಗೆ ಕಳುಹಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಪಠ್ಯದ ಚಟುವಟಿಕೆಗಳನ್ನು ಕಲಿಸುವುದರ ಜೊತೆಗೆ, ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬoದಿಸಿದoತೆ ಅರಿವು ಮೂಡಿಸಿ ಅವರುಗಳು ತಮ್ಮ ಪಾಲಕರು ಸೇರಿದಂತೆ ಕುಟುಂಬ ವರ್ಗದವರಿಗೆ ಮನವರಿಸಿ ಮುಂಜಾಗ್ರತೆ ವಹಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು, ವಿದ್ಯಾರ್ಥಿಗಳೂ ಸಹ ಈ ಕಾರ್ಯಕ್ಕೆ ಮುಂದಾಗಬೇಕು ಎಂದರು.

ವಿದ್ಯಾರ್ಥಿಗಳು ಕಳೆದ ಒಂದುವರೆ ವರ್ಷದಿಂದ ಕೊರೋನ ಸೋಂಕು ಮಹಾಮಾರಿ ವ್ಯಾಪಕ ಹರಡುವಿಕೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಹಾಜರಾಗದೆ, ಆನ್‌ಲೈನ್ ಶಿಕ್ಷಣ ಪಡೆಯುತ್ತಿದ್ದರು. ಇಂದಿನಿoದ ಭೌತಿಕ ತರಗತಿಗಳು ಪ್ರಾರಂಭವಾದ ಹಿನ್ನೆಲೆ ವಿದ್ಯಾರ್ಥಿಗಳು ಶಿಕ್ಷಕರಿಂದ ನೇರವಾಗಿ ಪಾಠ-ಪ್ರವಚನಗಳನ್ನು ಕೇಳುವುದರೊಂದಿಗೆ ತಮ್ಮ ಸ್ನೇಹಿತರ ಜೊತೆಗೆ ಬೆರೆಯಲು ಅವಕಾಶ ದೊರೆತಿದೆ ಎಂದರು.

ಜಿಲ್ಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕರು ಶೇ. 100 ರಷ್ಟು ಹಾಗೂ ಅನುದಾನಿತ ಶಾಲೆಯ ಶಿಕ್ಷಕರು ಶೇ. 90 ರಷ್ಟು ಕೊರೋನ ಸೋಂಕು ನಿರೋಧಕ ಚುಚ್ಚುಮದ್ದು ಪಡೆದಿರುವುದು ಒಳ್ಳೆಯದು ಎಂದ ಅವರು, ಬಾಕಿ ಉಳಿದ ಶಿಕ್ಷಕರು ಶೀಘ್ರದಲ್ಲಿಯೇ ಚುಚ್ಚುöಮದ್ದನ್ನು ಪಡೆಯಬೇಕು ಎಂದು ತಿಳಿಸಿದರು.

ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಸೇರಿದಂತೆ ಮತ್ತಿತರ ಕೋವಿಡ್ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಅನುಸರಿಸಿ ಸುರಕ್ಷತೆಯೊಂದಿಗೆ ಶಾಲೆಯ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ನಡೆಯಬೇಕು ಎಂದರು.

ಈ ಪ್ರೌಢಶಾಲೆಯಲ್ಲಿ 236 ವಿದ್ಯಾರ್ಥಿಗಳಲ್ಲಿ 205 ವಿದ್ಯಾರ್ಥಿಗಳು, ಪದವಿಪೂರ್ವ ಕಾಲೇಜಿನಲ್ಲಿ 259 ವಿದ್ಯಾರ್ಥಿಗಳಲ್ಲಿ 200 ವಿದ್ಯಾರ್ಥಿಗಳು ಶಾಲೆಯ ಆರಂಭದ ಪ್ರಥಮ ದಿನದಲ್ಲೇ ಹಾಜರಾಗಿರುವುದು ಹರ್ಷ ತಂದಿದೆ ಎಂದರು.

ವಿದ್ಯಾರ್ಥಿಗಳು ಬೋಧನೆಯ ವಿಷಯಕ್ಕೆ ಹಾಗೂ ಕೊರೋನಾದ ಬಗ್ಗೆ ಯಾವುದೇ ರೀತಿಯ ಆತಂಕಗಳಿದ್ದಲ್ಲಿ ಶಾಲೆಯ ಶಿಕ್ಷಕರು, ಪ್ರಾಚಾರ್ಯರು ಅಥವಾ ತಮ್ಮೊಂದಿಗೆ ಮುಕ್ತವಾಗಿ ಹಂಚಿಕೊAಡು ತಮ್ಮಲ್ಲಿರುವ ಗೊಂದಲಗಳನ್ನು ನಿವಾರಿಸಿಕೊಳ್ಳಬೇಕು ಎಂದರು.

ಜಿಲ್ಲೆಯ ಅಭಿವೃದ್ಧಿ ಸೇರಿದಂತೆ ಕೊರೋನ ನಿಯಂತ್ರಣಕ್ಕೆ ಕೈಗೊಳ್ಳುವ ಕಾರ್ಯಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಮಾತನಾಡಿ, ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುವುದಾಗಿ ಮತ್ತು ಜಿಲ್ಲೆಯಲ್ಲಿ ಹೆಚ್ಚು ಪ್ರವಾಸ ಮಾಡವುದರೊಂದಿಗೆ ಕೆಳ ಹಂತದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅವರುಗಳ ಅವಶ್ಯಕತೆಗಳನ್ನು ಅರಿತು ಅವುಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.

6 ರಿಂದ 8 ನೇ ತರಗತಿಗಳು ಇತರೆ ಜಿಲ್ಲೆಗಳಲ್ಲಿ ಆರಂಭವಾಗುವ ಸಮಯದಲ್ಲಿ ಉಡುಪಿ ಜಿಲ್ಲೆಯಲ್ಲಿಯೂ ಆರಂಭವಾಗಲಿದೆಯೇ ಎಂಬ ಪ್ರಶ್ನೆಗೆ, ಕೋವಿಡ್ ಪಾಸಿಟಿವ್ ರೇಟ್ ಆಧಾರದ ಮೇಲೆ ಹಾಗೂ ಸರಕಾರದ ನಿರ್ಧಾರವನ್ನು ಪರಿಗಣಿಸಿ ತೀರ್ಮಾನಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಿದರು.

ಪದವಿಪೂರ್ವ ಶಿಕ್ಷಣದ ಇಲಾಖೆಯ ಉಪನಿರ್ದೇಶಕ ಮಾರುತಿ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಹೆಚ್. ನಾಗೂರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮಾರಾವ್ ಎಂ.ಅಧಿಕಾರ ಸ್ವೀಕಾರ


ಉಡುಪಿ, : ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮಾರಾವ್ ಎಂ. ಭಾ.ಆ.ಸೇ. ಅವರು ಇಂದು ಅಧಿಕಾರ ಸ್ವೀಕರಿಸಿದರು.

ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಟೆಕ್. ಪದವಿ ಪಡೆದಿರುವ ಇವರು , 2011 ರಲ್ಲಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗಿದ್ದಾರೆ.

2018 ರಿಂದ 2020 ರ ವರೆಗೆ 2 ವರ್ಷ 1 ತಿಂಗಳು ಯಾದಗಿರಿ ಜಿಲ್ಲಾಧಿಕಾರಿಯಾಗಿ ಹಾಗೂ 2020 ರಿಂದ 2021 ರ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂ.ಡಿ ಯಾಗಿ ಕಾರ್ಯನಿರ್ವಹಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

6 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

7 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

8 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

9 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

9 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

9 hours ago