Featured

ಶಾಲಾ ಕಾಲೇಜು ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ ಪಾಲ್ ಸುವರ್ಣ -Vishwanews24

ಶಾಲಾ ಕಾಲೇಜು ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ ಪಾಲ್ ಸುವರ್ಣ -Vishwanews24

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ರಾಜ್ಯ ಸರಕಾರದ ಆದೇಶ ಶಿಕ್ಷಣ ವ್ಯವಸ್ಥೆಯಲ್ಲಿ ಹಿಜಾಬ್ ವಿವಾದದ ವಿಚಾರದಲ್ಲಿ ಹೋರಾಟಕ್ಕೆ ಸಂದ ಪ್ರಥಮ ಗೆಲುವು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ರಾಜ್ಯದಾದ್ಯಂತ ಶಾಲಾ ಕಾಲೇಜಿನಲ್ಲಿ ಹಿಜಾಬ್ ವಿಚಾರದ ಮೂಲಕ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಮನವಿಗೆ ಶೀಘ್ರವಾಗಿ ಸ್ಪಂದಿಸಿ

ಆದೇಶ ನೀಡಿದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಶ್ರೀ ಬಿ.ಸಿ. ನಾಗೇಶ್‌ ರವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ನಿಯಮದನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸತಕ್ಕದ್ದು, ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನು ಧರಿಸತಕ್ಕದ್ದು ಎಂಬ ಆದೇಶ ನೀಡಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯ ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸುವುದು. ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೆ ಇದ್ದಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸುವಂತೆ ಆದೇಶಿಸುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆತರಲು ಯತ್ನಿಸುತ್ತಿದ್ದ ಮತೀಯವಾದಿ ರಾಷ್ಟ್ರ ವಿರೋಧಿ ಸಂಘಟನೆಗೆ ತಕ್ಕ ಉತ್ತರ ನೀಡಿದೆ.

ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲೂ ನಮ್ಮ ಹೋರಾಟಕ್ಕೆ ಗೆಲುವು ಸಿಗುವ ವಿಶ್ವಾಸವಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago