Featured

ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ನಾರಾಯಣ ಗುರುಗಳಿಗೆ ಅವಮಾನ – ಸರಕಾರಕ್ಕೆ ಬಿಲ್ಲವ ಸಮಾಜದಿಂದ ಹೋರಾಟದ ಎಚ್ಚರಿಕೆ

ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ನಾರಾಯಣ ಗುರುಗಳಿಗೆ ಅವಮಾನ –

ಸರಕಾರಕ್ಕೆ ಬಿಲ್ಲವ ಸಮಾಜದಿಂದ ಹೋರಾಟಎಚ್ಚರಿಕೆ

ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಲ್ಲವ ಮುಖಂಡರು, ಶಾಲಾ ಪಠ್ಯಪುಸ್ತಕದಲ್ಲಿ ಬಸವಣ್ಣ, ಕುವೆಂಪು, ಅಂಬೇಡ್ಕರ್‌, ಭಗತ್‌ಸಿಂಗ್‌ ಗೆ ಅವಮಾನವಾಗಿದೆ ಎಂದು ರಾಜ್ಯವ್ಯಾಪಿ ಹೋರಾಟ ಆರಂಭವಾಯಿತು.

ಇದೇ ವೇಳೆ ಆದಿಚುಂಚನ ಮಠದ ಶ್ರೀಗಳು ಕುವೆಂಪು ವಿಚಾರದಲ್ಲಿ ಅಪಸ್ವರ ಎತ್ತಿದಾಗ ಸರಕಾರ ಅವರ ಬಳಿ ಓಗೊಡಲು ಹೋಯಿತು. ಜೊತೆಗೆ ಲಿಂಗಾಯಿತ ಸಮಾಜದ ಸ್ವಾಮಿಗಳು ವಿರೋಧ ವ್ಯಕ್ತಪಡಿಸಿದಾಗ ಸರಕಾರವೇ ಅವರ ಬಳಿ ಓಡಿಹೋಯಿತು.

ಆದರೆ ಪ್ರಾರಂಭದಲ್ಲಿ ಮುನ್ನೆಲೆಗೆ ಬಂದ ಬ್ರಹ್ಮರ್ಷಿ ನಾರಾಯಣ ಗುರುಗಳ ವಿಚಾರದಲ್ಲಿ ಸಮಾಜ ಸರಕಾರಕ್ಕೆ ಎಚ್ಚರಿಕೆ ನೀಡಿದರೂ, ಸಮಾಜ ಪಠ್ಯ ಪುಸ್ತಕದಲ್ಲಿ ಗುರುಗಳ ವಿಷಯ ಕೈ ಬಿಟ್ಟು ಹಿಂದುಳಿದ ಸಮುದಾಯಕ್ಕೆ ಅವಮಾನ ಮಾಡಿದೆ.

ಬ್ರಹ್ಮರ್ಷಿ ನಾರಾಯಣ ಗುರುಗಳ ಪಠ್ಯ ಕನ್ನಡ ಮಾಧ್ಯಮದಲ್ಲಿ ಐಚ್ಛಿಕವಾಗಿ ಪ್ರಥಮ ಭಾಷೆಯಾಗಿ ಕನ್ನಡ ಆಯ್ದುಕೊಂಡವರು ಮಾತ್ರ ಓದುತ್ತಾರೆ.

ಆದರೆ ಅದೇ ಐಚ್ಛಿಕ ಪ್ರಥಮ ಭಾಷೆಯಾಗಿ ಸಂಸ್ಕೃತ, ಹಿಂದಿ ತೆಗೆದುಕೊಂಡವರಿಗೆ ಇದು ಅಲಭ್ಯ. ಆದ್ದರಿಂದ ಈ ಪಠ್ಯ ಸಮಾಜ ಪುಸ್ತದಲ್ಲಿಯೇ ಇರಬೇಕು ಯಾಕೆಂದರೆ ಎಲ್ಲಾ ವಿದ್ಯಾರ್ಥಿಗಳು ಇದನ್ನು ಕಲಿಯಲು ಅವಕಾಶ ಸಿಗುತ್ತದೆ.

ಸಮಾಜ ಪಠ್ಯ ಪುಸ್ತಕದಲ್ಲಿ ಕೇವಲ ಹಿಂದುಳಿದ ವರ್ಗದ ಪೆರಿಯಾರ್‌ ಹಾಗೂ ನಾರಾಯಣ ಗುರುಗಳ ಪಠ್ಯ ಕೈಬಿಟ್ಟಿರುವುದು ದುದೃಷ್ಟಕರ ಹಾಗೂ ರಾಜ್ಯದಲ್ಲಿ 50 ಶೇಕಡಾ ಇರುವ ದಲಿತ, ಹಿಂದುಳಿದ ವರ್ಗಕ್ಕೆ ಮಾಡಿದ ಅಪಮಾನ, ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಗಣರಾಜ್ಯೋತ್ಸವದ ಪರೇಡ್‌ನ ಸ್ತಬ್ಧಚಿತ್ರದ ಅವಮಾನ, ಮಂಗಳೂರು ವಿಮಾನ ನಿಲ್ದಾಣಕ್ಕೆ ಅವಳಿ ವೀರರ ಕೋಟಿ-ಚೆನ್ನಯ್ಯ ಹೆಸರಿಡುವುದರಲ್ಲಿ ಸರಕಾರ ಅಸಡ್ಡೆ ತೋರಿಸಿದೆ. ಇದೀಗ ಪಠ್ಯ ಪುಸ್ತಕದಲ್ಲೂ ನಾರಾಯಣ ಗುರುಗಳನ್ನು ಅವಮಾನ ಮಾಡಿದೆ.

ಕುವೆಂಪು, ಬಸವಣ್ಣ ಪಠ್ಯದಲ್ಲಿ ಗೊಂದಲಗಳಾದಾಗ ಸರಿಪಡಿಸುತ್ತೇವೆ ಎಂಬ ಹೇಳಿಕೆ ನೀಡುವ ನೀವು ನಾರಾಯಣ ಗುರುಗಳ ವಿಷಯದಲ್ಲಿ ಯಾಕೆ ಮಾತನಾಡುವುದಿಲ್ಲ ಎಂದು ಸರಕಾರವನ್ನು ಪ್ರಶ್ನಿಸಿದರು. ಈಗಲಾದರೂ ಪೂರಕ ಪಠ್ಯ ಸೇರಿಸಬೇಕೆಂಬುವುದು ನಮ್ಮ ಹಕ್ಕೊತ್ತಾಯ.

ಇಲ್ಲದಿದ್ದರೆ ಈ ಬಗ್ಗೆ ಶೀಘ್ರದಲ್ಲಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಉಗ್ರ ಹೋರಾಟದ ರೂಪುರೇಷೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್‌ ಸುರತ್ಕಲ್‌, ಗುರುಬೆಳದಿಂಗಳು ಇದರ ಅಧ್ಯಕ್ಷ ಆರ್‌.ಪದ್ಮರಾಜ್‌, ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

6 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

7 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

8 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

8 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

8 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

9 hours ago