Featured

ಶಾಲಾ ಪ್ರಾರಂಭೋತ್ಸವಕ್ಕೆ ಸಡಗರದ ಚಾಲನೆ : ಯಶ್ಪಾಲ್ ಸುವರ್ಣ – Vishwanews24

ಶಾಲಾ ಪ್ರಾರಂಭೋತ್ಸವಕ್ಕೆ ಸಡಗರದ ಚಾಲನೆ : ಯಶ್ಪಾಲ್ ಸುವರ್ಣ

ಉಡುಪಿ: ಸರ್ಕಾರಿ ಶಾಲೆಗಳು ಹೊಸ ಶೈಕ್ಷಣಿಕ ವರ್ಷದೊಂದಿಗೆ ಮೇ 31 ಬುಧವಾರ ಪುನರಾರಂಭಗೊಳ್ಳಲಿದ್ದು, ಉಡುಪಿ ವಿಧಾನ ಸಭಾ ಕ್ಷೇತ್ರದ 72 ಸರ್ಕಾರಿ ಶಾಲೆಗಳು ಮಕ್ಕಳ ಸ್ವಾಗತಕ್ಕೆ ಸಜ್ಜಾಗಿವೆ.

ಉಡುಪಿ ನಗರದ ವಳಕಾಡು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಳಿಗ್ಗೆ 9.00 ಗಂಟೆಗೆ ಮಾನ್ಯ ಶಾಸಕರು ಪ್ರಾರಂಭೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬಳಿಕ 10.00 ಗಂಟೆಗೆ ನಿಟ್ಟೂರು ಹನುಮಂತ ನಗರದ ಶಾಲೆ, 10.30 ಕ್ಕೆ ಬೋರ್ಡ್ ಹೈಸ್ಕೂಲ್ ಬ್ರಹ್ಮಾವರ, 11.30 ಗಂಟೆಗೆ ಕೆ.ಪಿ.ಎಸ್‍. ಶಾಲೆ, ಕೊಕ್ಕರ್ಣೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳಲ್ಲಿ ಶಾಸಕರು ಭಾಗವಹಿಸಲಿದ್ದಾರೆ.

ಉಡುಪಿ ವಿಧಾನ ಸಭೆ ವ್ಯಾಪ್ತಿಯ ಎಲ್ಲಾ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ಸಂಬಂಧಿಸಿದ ಸಮೀಪದ ತಮ್ಮ ಶಾಲೆಗಳ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮ ಹೆಚ್ಚಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.

ಶಾಸಕರು ಪ್ರವರ್ತಕರಾಗಿರುವ ಪುಷ್ಪಾನಂದ ಫೌಂಡೇಶನ್‍ ವತಿಯಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಡುಪಿ ವಿಧಾನ ಸಭಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಯ ಸುಮಾರು 12,000 ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ ಎಂದು ಶಾಸಕರ ಕಛೇರಿ ಪ್ರಕಟಣಿ ತಿಳಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago