Featured

ಶಾಲಾ ಬ್ಯಾಗ್ ಹೊರೆ ಇಳಿಸಲು ಮುಂದಾದ ರಾಜ್ಯ ಸರ್ಕಾರ ; ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ -Vishwanews24

ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ

ಬೆಂಗಳೂರು: ಶಾಲಾ ಬ್ಯಾಗ್ ಹೊರೆ ಇಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಸದ್ಯದಲ್ಲೇ ಅಧಿಕೃತ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಲಿದೆ ಎನ್ನಲಾಗಿದೆ.

ತಿಂಗಳ ಮೂರನೇ ಶನಿವಾರವನ್ನು ಬ್ಯಾಗ್‌ ರಹಿತ ದಿನವೆಂದು ಆಚರಿಸಬೇಕು ಎಂದು ಆದೇಶಿಸಲಿರುವ ಸರ್ಕಾರ, ಪಠ್ಯಪುಸ್ತಕ ಅಥವಾ ಇತರ ಪೂರಕ ಸಾಮಗ್ರಿಗಳ ಅವಶ್ಯಕತೆ ಇಲ್ಲದ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿವಿದ್ಯಾರ್ಥಿಗಳನ್ನು ತೊಡಗಿಸುವ ನಿಟ್ಟಿನಲ್ಲಿ ಸಲಹಾತ್ಮಕ ಚಟುವಟಿಕೆಗಳ ಪಟ್ಟಿಯನ್ನು ನೀಡಲಿದೆ.

ಇನ್ನು 2019 ಎಪ್ರೀಲ್ 16 ರಂದು ನಡೆದಿದ್ದ ಸಭೆಯಲ್ಲಿ ಬ್ಯಾಗ್ ತೂಕ ವಿದ್ಯಾರ್ಥಿಯ ದೇಹದ ತೂಕದ ಶೇ 10 ನ್ನು ಮೀರದಂತಿರಬೇಕು ಅನ್ನೋ ತೀರ‍್ಮಾನಕ್ಕೆ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಒಂದರಿಂದ ಎರಡನೇ ತರಗತಿ ಮಕ್ಕಳಿಗೆ 1.5ಕೆ.ಜಿ ಯಿಂದ 2 ಕೆ.ಜಿ , ಮೂರರಿಂದ ಐದನೇ ತರಗತಿ ಮಕ್ಕಳಿಗೆ- 2 ರಿಂದ 3 ಕೆ.ಜಿ, ಆರರಿಂದ ಎಂಟನೇ ತರಗತಿ ಮಕ್ಕಳಿಗೆ 3 ರಿಂದ 4 ಕೆ.ಜಿ, ಒಂಬತ್ತರಿಂದ ಹತ್ತನೇ ತರಗತಿ ಮಕ್ಕಳಿಗೆ 4 ರಿಂದ 5 ಕೆ.ಜಿ ತೂಕದ ಬ್ಯಾಗ ಇರಬೇಕು ಎನ್ನುವುದರ ಬಗ್ಗೆ ಸದ್ಯದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆಯಂತೆ.

“ಕ್ಷೇತ್ರ ಸಂಚಾರ, ವಾರ್ತಾಪತ್ರಿಕೆಗಳ ಚಟುವಟಿಕೆಗಳು, ಗಣಿತದ ವಿನೋದ, ಅಬ್ಯಾಕಸ್‌ ಅಲ್ಲದೆ, ಶಾಲಾ ಬ್ಯಾಗ್‌ ಹೊರೆ ಇಳಿಸಲು ಶಾಲಾ ವಾತಾವರಣಕ್ಕೆ ಸೂಕ್ತವಾದ ಅಭ್ಯಾಸಗಳನ್ನು ಅಳವಡಿಸಬೇಕು,” ಎಂದು ಶಾಲಾಮುಖ್ಯಸ್ಥರಿಗೆ ಸೂಚಿಸಲಿದೆ.

ಅಷ್ಟೇ ಅಲ್ಲ. ವಿಜ್ಞಾನದ ಪ್ರಯೋಗ, ಪ್ರದರ್ಶನ, ಸಾಮಾನ್ಯ ಜ್ಞಾನ ಶೈಕ್ಷಣಿಕ ಸಂಘದ ಚಟುವಟಿಕೆಗಳು, ಮಣ್ಣಿನಲ್ಲಿ ವಸ್ತುಗಳ ತಯಾರಿಕೆ, ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಸೇರಿದಂತೆ ಇನ್ನಿತರೆಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಮಾನವ ಸಂಪನ್ಮೂಲಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರಪಾಲಿಸುವಂತೆ ನಿರ್ದೇಶನ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತೂಕವಿರುವ ಶಾಲಾ ಬ್ಯಾಗ್‌ಗಳನ್ನು ಹೊತ್ತೊಯ್ಯುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕಸಮಸ್ಯೆಗಳಿಗೆ ಗುರಿಯಾಗುತ್ತಾರೆ. ಬೆನ್ನು ನೋವು, ಭುಜದ ನೋವು ಮತ್ತಿತರ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳಲು ಬ್ಯಾಗ್‌ ಭಾರವೇ ಮೂಲ ಕಾರಣ ಎಂಬುದು ವೈಜ್ಞಾನಿಕ ಅಧ್ಯಯನಗಳಿಂದ ದೃಢಪಟ್ಟಿತ್ತು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago